ಹೊಸ ಭೂಕುಸಿತ, ಶ್ರೀನಗರ-ಜಮ್ಮು ರಸ್ತೆ ಸಂಚಾರ ಮತ್ತೆ ಬಂದ್
ಶ್ರೀನಗರಮಾರ್ಚ್ 11, ಹೊಸ ಭೂಕುಸಿತ , ಪ್ರತಿಕೂಲ ಹವಾಮಾನದ ಕಾರಣ 270 ಕಿ.ಮೀ ಉದ್ದದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಸಂಚಾರ ಮತ್ತೆ ಸ್ಥಗಿತವಾಗಿದೆ. ಈ ನಡುವೆ ಲಡಾಕ್ನ ಕೇಂದ್ರಾಡಳಿತ ಪ್ರದೇಶವನ್ನು (ಯುಟಿ) ಕಾಶ್ಮೀರದೊಂದಿಗೆ ಸಂಪರ್ಕಿಸುವ ಬೀಕನ್ ಹೆದ್ದಾರಿಯಲ್ಲಿ ಬೃಹತ್ ಹಿಮ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಹಿಮದ ಕಾರಣ 434 ಕಿ.ಮೀ ಉದ್ದದ ಶ್ರೀನಗರ-ಲೇಹ್ ಹೆದ್ದಾರಿ ಕಳೆದ ಮೂರು ತಿಂಗಳಿನಿಂದ ಮುಚ್ಚಿದೆ. 86 ಕಿ.ಮೀ ಉದ್ದದ ಐತಿಹಾಸಿಕ ಮೊಘಲ್ ರಸ್ತೆ ಮತ್ತು ಅನಂತ್ನಾಗ್-ಕಿಶ್ತ್ವಾರ್ ರಸ್ತೆ ಕಳೆದ ಎರಡು ತಿಂಗಳುಗಳಿಂದ ಹಿಮದ ಕಾರಣ ಮುಚ್ಚಿದೆ. ಸಂಚಾರ ಮತ್ತು ಎನ್ಎಚ್ಎಐ ಅಧಿಕಾರಿಗಳಿಂದ ಹಸಿರು ನಿಶಾನೆ ದೊರಕಿದ ನಂತರ ಲ್ ಬಂದ ನಂತರ ಸಂಚಾರ ಮತ್ತೆ ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಹಿಮ ಮತ್ತು ಮಳೆಯಾಗುವ ಮುನ್ಸೂಚನೆ ಇದೆ ಎಂದರು. ಶ್ರೀನಗರ-ಜಮ್ಮು ಹೆದ್ದಾರಿಗೆ ಪರ್ಯಾಯ ರಸ್ತೆಯ ಮೂಲಕ ಹೋಗಲು ಇನ್ನೂ ಎರಡು ತಿಂಗಳು ಸಮಯ ಬೇಕಾಗುತ್ತದೆ. ಹಿಮದಿಂದಾಗಿ ಅನಂತ್ನಾಗ್-ಕಿಶ್ತ್ವಾರ್ ರಸ್ತೆ ಸಹ ಮುಚ್ಚಲ್ಪಟ್ಟಿದ್ದು ಸಂಚಾರಕ್ಕೆ ತೊಂದರೆಯಾಗಿದೆ ಎಂದೂ ಅವರು ಹೇಳಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 