ಬಿಜೆಪಿ ವಿರುದ್ಧ ತಿರುಗಿಬಿದ್ದ ಎಲ್ ಜೆ ಪಿ
ನವದೆಹಲಿ, ನ 12 : ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗಿನ ಸಖ್ಯವನ್ನು ಶಿವಸೇನೆ ಕಡಿದುಕೊಂಡು ಹೊರಬಂದಿರುವಾಗಲೇ ಬಿಜೆಪಿಯ ದೊಡ್ಡಣ್ಣನ ನೀತಿಯನ್ನು ಸಹಿಸಲಾಗದು ಎಂದು ಲೋಕಜನಶಕ್ತಿ ಪಾರ್ಟ್ ತಿರುಗಿಬಿದ್ದಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಸಂಬಂಧ ಮುರಿದುಕೊಂಡು ದೂರವಾಗಿರುವ ಕ್ರಮವನ್ನು ಎಲ್ ಜೆ ಪಿ ಅಧ್ಯಕ್ಷ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ಪ್ರಶಂಸೆ ಮಾಡಿದ್ದಾರೆ. ಬಿಜೆಪಿಯ ದೊಡ್ಡಣ್ಣನ ಕಾರ್ಯನೀತಿಯನ್ನು, ನಡವಳಿಕೆಯನ್ನು ಬಹಳಕಾಲ ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಬಿಜೆಪಿಯ ಉನ್ನತ ನಾಯಕರು ಇದನ್ನು ಅರ್ಥಮಾಡಿಕೊಂಡು ಮಿತ್ರಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು ಎಂದು ಅವರು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಮಗೆ ಆರು ಸೀಟುಗಳನ್ನು ಬಿಟ್ಟುಕೊಡಬೇಕೆಂದು ಮನವಿ ಮಾಡಿಕೊಂಡಿದ್ದರೂ, ಬಿಜೆಪಿ ಯಾವುದೇ ರೀತಿ ಸ್ಪಂದನೆ ಮಾಡುತ್ತಿಲ್ಲ. ಇಂತಹ ವರ್ತನೆಯನ್ನು ನಾವು ಬಿಜೆಪಿಯಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಒಂದು ವೇಳೆ ಬಿಜೆಪಿ, ತಮ್ಮ ಬೇಡಿಕೆಯನ್ನು ಒಪ್ಪದೇ ಹೋದಲ್ಲಿ ಎಲ್ ಜೆ ಪಿ, ಜಾರ್ಖಂಡ್ ವಿಧಾನಸಭಾ ಚುನಾವಣೆಯ 37 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 