ಕೆರೆಯ ಪೈಪ್ಲೈನ್ ಸೋರಿಕೆ : ಅಡಿಕೆ,ಮೆಕ್ಕೆಜೋಳ ಬೆಳೆ ನಾಶ
Lake pipeline leak: Arecanut and maize crops destroyed
ಲೋಕದರ್ಶನ ವರದಿ
ಹೂವಿನಹಡಗ 21: ಇಲ್ಲಿನ ತುಂಗಭದ್ರಾ ನದಿ ತೀರದ ರಾಜವಾಳ ಬಳಿಯಿಂದ ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಗುರುವಾರ ತಿಪ್ಪಾಪುರ ಬಳಿ ಪೈಪ್ಲೈನ್ ಸೋರಿಕೆ ಉಂಟಾಗಿ ಅಪಾರ ನೀರು ಪೋಲಾಗಿ ಅಡಿಕೆ,ಮೆಕ್ಕೆಜೋಳ ಅಪಾರ ಬೆಳೆ ನಾಶವಾಗಿದೆ.’ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪೈಪ್ಲೈನ್ ಒಡೆದು ಸೋರಿಕೆಯಿಂದ ಅಪಾರ ಪ್ರಮಾಣದ ನೀರು ರೈತರ ಕೃಷಿ ಜಮೀನು ಹರಿಯುತ್ತಿದ್ದು ರೈತ ಸತ್ಯನಾರಾಯಣ ಅವರ ಅಡಿಕೆ ಗಿಡಗಳು ನೀರಿನ ರಭಸಕ್ಕೆ ನೆಲಕಚ್ಚಿದೆ ಮತ್ತು ರೈತ ಗಂಟೆ ಸಾಹೇಬ ಅವರ ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಬೆಳೆ ಸಂಪೂರ್ಣ ಹಾನಿಯಾಗಿದೆ.ಕೂಡಲೇ ಸಂಭಂಧಿಸಿದ ಅಧಿಕಾರಿಗಳು ಸ್ಥಳ ಪರೀಶೀಲನೆ ಮಾಡಿ ನಷ್ಟಕ್ಕೊಳಗಾದ ರೈತರಿಗೆ ಸರ್ಕಾರ ದಿಂದ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 