ಭೂಕುಸಿತ: ನಿಪ್ಪಾಣಿ - ಕೊಲ್ಹಾಪುರ ಸಂಚಾರ ಸ್ಥಗಿತ
ಬೆಳಗಾವಿ, ಆಗಸ್ಟ್ 6 ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಪ್ಪಾಣಿ ಮತ್ತು ಕೊಲ್ಹಾಪುರ ನಡುವಣ ವಾಹನ ಸಂಚಾರ ಸೋಮವಾರ ರಾತ್ರಿಯಿಂದ ಸ್ಥಗಿತಗೊಂಡಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಮಂಗಳವಾರ ತಿಳಿಸಿದ್ದಾರೆ.
ಯುಎನ್ಐ ಜೊತೆ ಮಾತನಾಡಿದ ಉತ್ತರ ವಲಯದ ಐಜಿಪಿ ರಾಗವೆನ್ಸ್ರಾ ಸುಹಾಸ್ ಅವರು, ಕರ್ನಾಟಕ ಗಡಿಯಿಂದ 12 ಕಿ.ಮೀ ದೂರದ ಕೊಗನ ಕ್ರಾಸ್ ಬಳಿ ಭೂಕುಸಿತ ಸಂಭವಿಸಿದ್ದು, ಕೂಡಲೇ ಕೊಲ್ಹಾಪುರ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ವಾಹನ ಸಂಚಾರ ನಿಲ್ಲಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮುಂದಿನ ಆದೇಶದವರೆಗೆ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಹೋಗುವ ಎಲ್ಲಾ ವಾಹನ ಸಂಚಾರ ನಿಲ್ಲಿಸಲಾಗಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಪ್ಪಾಣಿಯಿಂದ ಕೊಲ್ಹಾಪುರಕ್ಕೆ ಸಂಚಾರ ಕೈಗೊಳ್ಳದಂತೆ ಅವರು ವಾಹನ ಸವಾರರಿಗೆ ಮನವಿ ಮಾಡಿದ್ದು .ಬುಧವಾರ ಸಂಜೆ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಂಡು, ಸಂಚಾರ ಎಂದಿನಂತೆ ಸುಗಮವಾಗಲಿದೆ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 