ಅದ್ದೂರಿ ಮದುವೆ: ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು
ಬೆಳಗಾವಿ, ಜುಲೈ 14: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಗನ ಅದ್ಧೂರಿ ಮದುವೆ ಮಾಡಿದ್ದ ಬಿಜೆಪಿ ಮುಖಂಡ ದಯಾನಂದ ವಂಟಮುರಿ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೋಮವಾರ ಕೊವಿಡ್-19 ನಿಯಮಗಳನ್ನು ಗಾಳಿಗೆ ತೂರಿ ಮಗನ ಮದುವೆ ಮಾಡಿದ್ದ ದಯಾನಂದ ವಂಟಮುರಿ, ಮಹಾರಾಷ್ಟ್ರದಿಂದ ಸಾಕಷ್ಟು ಜನರನ್ನು ಮದುವೆಗೆ ಕರೆಯಿಸಿದ್ದರು. ಮದುವೆ ಜೊತೆ ಸಂಜೆ ಗ್ರಾಮದಲ್ಲಿ ವಧು-ವರನ ಅದ್ಧೂರಿ ಮೆರವಣಿಗೆ ಮಾಡಿದ್ದರು.
500ಕ್ಕೂ ಹೆಚ್ಚು ಜನರನ್ನು ಮದುವೆಯಲ್ಲಿ ಸೇರಿದ್ದು, ಮಾಸ್ಕ್ ಬಳಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್-19 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 188, 269, 270, ಎಪಿಡೆಮಿಕ್ ಡಿಸೀಸ್ ಕಾಯ್ದೆ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಪ್ರಕರಣ ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಮದಹಳ್ಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರು 4 ಕಿ.ಮೀ ಅಂತರದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಈ ರೀತಿ ಅದ್ಧೂರಿ ಮದುವೆ ಮಾಡಿದ್ದು ಜನರಲ್ಲಿ ಆತಂಕಕ್ಕೆ ಹೆಚ್ಚಾಗುವಂತೆ ಮಾಡಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 