ಸಾಲ ವಸೂಲಾತಿ ವೇಳೆ ಕಾನೂನು ಉಲ್ಲಂಘನೆ ಮಾಡಕೂಡದು: ಮುಖ್ಯಮಂತ್ರಿ ಸಿದ್ದರಾಮಯ್ಯ
Law should not be violated during debt recovery: Chief Minister Siddaramaiah
ಬೆಂಗಳೂರು 25: ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ತಕ್ಷಣವೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಾಲ ವಸೂಲಿ ಮಾಡುವಾಗ ರಿಸರ್ವ್ ಬ್ಯಾಂಕಿನ ನಿಯಮ ಪಾಲಿಸಬೇಕು. ಐದು ಗಂಟೆಯ ಬಳಿಕ ವಸೂಲಿ ಮಾಡಲು ಹೋಗಬಾರದು. ಸಾಲ ವಸೂಲಾತಿಗೆ ಹೊರಗಿನವರನ್ನು. ಅಂದರೆ ಗೂಂಡಾಗಳನ್ನು ಬಳಕೆ ಮಾಡಬಾರದು. ಈ ರೀತಿ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಜೊತೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಮೈಕ್ರೋ ಫೈನಾನ್ಸ್ ಹಾಗೂ ಆರ್ಬಿಐ ಅವರ ಅಭಿಪ್ರಾಯ ಕೇಳಿದ್ದೇನೆ. ಸಾಲ ಕೊಡಬೇಡಿ ಎಂದು ನಾವು ಹೇಳಲ್ಲ, ವಸೂಲಿ ಮಾಡಬೇಡಿ ಎಂದೂ ಹೇಳಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಬಾರದು ಎಂದರು.
'ಸಾಲ ವಸೂಲಾತಿ ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಅಂತವರ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ತೇವೆ ಎಂದು ನಬಾರ್ಡ್ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗೆ, ಮನಿ ಲೆಂಡಿಂಗ್ ಮಾಡುವವರಿಗೆ ಎಚ್ಚರಿಕೆ ಕೊಟ್ಟಿದ್ದೇವೆ. ಇದಕ್ಕಾಗಿ ಹೊಸ ಕಾನೂನು ಮಾಡ್ತೇವೆ' ಎಂದರು.
ಪರವಾನಗಿ ಇಲ್ಲದೇ ಯಾರೂ ಕೂಡ ಮನಿ ಲೆಂಡಿಂಗ್ ಮಾಡಕೂಡದು. ಎಲ್ಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲು ಸೂಚನೆ ನೀಡಿದ್ದೇವೆ. ಅಲ್ಲಿ ದೂರುಗಳನ್ನ ಕೊಡಬಹುದು.
ದೂರು ಕೊಟ್ಟರೆ ದಾಖಲಿಸಿಕೊಳ್ಳಲು ಅಥವಾ ಸುಮೋಟೋ ಕೇಸ್ ದಾಖಲಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇವೆ. ಯಾರೇ ಒತ್ತಾಯದಿಂದ ವಸೂಲಿ ಮಾಡುವುದು ಗೂಂಡಾಗಳನ್ನ ಬಳಸಿ ವಸೂಲಿ ಮಾಡೋದು, ಅಗೌರವರಿಂದ ವಸೂಲಿ ಮಾಡಿದರೆ ಪೊಲೀಸರು ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.
ಮೈಕ್ರೋ ಪೈನಾನ್ಸ್ಗಳು ರಿಸರ್ವ್ ಬ್ಯಾಂಕ್ ಅಡಿ ನೋಂದಣಿ ಆಗಿರುತ್ತದೆ. ಕೇಂದ್ರ ಕಡಿವಾಣ ಹಾಕಬೇಕು, ಸಾಲಗಾರರಿಗೆ ಕಿರುಕುಳ ತಪ್ಪಿಸಲು, ಆತ್ಮಹತ್ಯೆ, ಊರು ಬಿಟ್ಟು ಹೋಗೋದನ್ನು ತಡೆಯಲು ಕೇಂದ್ರ ಸರ್ಕಾರ ಕಾನೂನು ಮಾಡಬೇಕು ಎಂದೂ ಒತ್ತಾಯ ಮಾಡುತ್ತೇವೆ ಎಂದರು.
ಶೇ 17.07 ಅಷ್ಟು ಬಡ್ಡಿ ವಸೂಲಿ ಮಾಡಲು ರಿಸರ್ವ್ ಬ್ಯಾಂಕ್ ಅವಕಾಶ ಕೊಟ್ಟಿದೆ. ಆದರೆ, ಕೆಲವು ಕಡೆ ಹೆಚ್ಚು ಬಡ್ಡಿ ವಸೂಲಿ ಮಾಡಲಾಗುತ್ತಿದೆ. ಹಾಗೇ ಒಂದು ಕುಟುಂಬಕ್ಕೆ ಮೂರು ಸಾಲ ಅಷ್ಟೇ ಕೊಡಬೇಕು. ಆದರೆ, ಅದನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದರು.
ಸಾಲಗಾರರು ₹ 59,367 ಕೋಟಿ ಸಾಲು ಕಟ್ಟಲು ಬಾಕಿಯಿದೆ. 1.09 ಕೋಟಿ ಖಾತೆಗಳ ಸಾಲ ಕಟ್ಟಲುು ಬಾಕಿಯಿದೆ. ಇವೆಲ್ಲವೂ ಅಧಿಕೃತ. ಆದರೆ ಅನಧಿಕೃತವಾದ ಇನ್ನೂ ಸಾಕಷ್ಟು ಖಾತೆಗಳಿವೆ. ಕಿರುಕುಳ ಕೊಟ್ಟವರ ಮೇಲೆ ಇಲ್ಲಿಯವರೆಗೆ 7 ಕೇಸ್ ದಾಖಲಾಗಿದೆ ಎಂದರು.
ಬೇರೆ ರಾಜ್ಯಗಳಲ್ಲೂ ಕಾನೂನು ಮಾಡಿದ್ದಾರೆ. ಆಂಧ್ರಪ್ರದೇಶದಲ್ಲಿ ಮಾಡಿದ್ದಾರೆ ಅದನ್ನು ಕೂಡ ನೋಡುತ್ತೇವೆ. ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಮಾಡುತ್ತೇವೆ. ಈ ಕಿರುಕುಳ ತಪ್ಪಿಸಲಿಕ್ಕೆ ಕೇಂದ್ರ ಸರ್ಕಾರ ಕೂಡ ಕಾನೂನು ಮಾಡಬೇಕು ಅಂತ ಒತ್ತಾಯ ಮಾಡುತ್ತೇವೆ ಎಂದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 