ವಕೀಲ ಸಂತೋಷ ಪಾಟೀಲ ಅಪಹರಣ
Lawyer Santosh Patil kidnapped
ರಾಯಬಾಗ 09: ತಾಲೂಕಿನ ಸವಸುದ್ದಿ ಗ್ರಾಮದ ವಕೀಲ ಸಂತೋಷ ಅಶೋಕ ಪಾಟೀಲ ಇವರನ್ನು ಏ.29 ರಂದು ಮುಂ.10.30ರ ಸುಮಾರಿಗೆ ರಾಯಬಾಗ ನ್ಯಾಯಾಲಯಕ್ಕೆ ಬೈಕ್ ಮೇಲೆ ಹೋಗುವಾಗ ರಾಯಬಾಗ-ಕಂಕಣವಾಡಿ ರಸ್ತೆಯ ಶಾಹುಪಾರ್ಕ ಗ್ರಾಮ ಹದ್ದಿಯ ಬಸ್ ನಿಲ್ದಾಣ ಹತ್ತಿರ ಅಪಹರಣ ಮಾಡಿರುವದಾಗಿ ಆತನ ಪತ್ನಿ ರೇಖಾ ಪಾಟೀಲ ರಾಯಬಾಗ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪಹರಣಕ್ಕೊಳಗಾದ ಸಂತೋಷ ಪಾಟೀಲ ಅವರು 33 ವಯಸ್ಸಿನವರಾಗಿದ್ದು, 5ಫೂಟ್ 6ಇಂಚ್ ಎತ್ತರವಿದ್ದು, ಸದೃಢ ಮೈಕಟ್ಟು, ಗೋದಿ ಮೈಬಣ್ಣ, ದುಂಡು ಮುಖ ಹೊಂದಿರುವ ಇವರು ಕನ್ನಡ ಭಾಷೆ ಮಾತನಾಡುತ್ತಾರೆ.
ಇವರು ಬಿಳಿ ಬಣ್ಣದ ಶರ್ಟ, ಕಪ್ಪು ಚೆಕ್ಸ್ ಪ್ಯಾಂಟ್ ಧರಿಸಿದ್ದು, ಇವರ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ, ರಾಯಬಾಗ ಪೊಲೀಸ ಠಾಣೆ ದೂರವಾಣಿ ಸಂಖ್ಯೆ: 08331-225333, 9480804060ಗೆ ಸಂಪರ್ಕಿಸಲು ಕೋರಲಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 