ಪ್ರಚೋದನಕಾರಿ ಹೇಳಿಕೆ ನೀಡುವ ಸ್ವಪಕ್ಷೀಯರಿಗೆ ಯಡಿಯೂರಪ್ಪ ಕಡಿವಾಣ ಹಾಕಲಿ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಏ 8, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಳಿರುವ ನಿಲುವಿನ ಬಗ್ಗೆ ಅವರ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಇಂತಹವುಗಳಿಗೆ ಕಡಿವಾಣ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಮುಖ್ಯಮಂತ್ರಿಗಳು ತಾಳಿರುವ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ. ಆದರೆ ಅವರ ಸ್ಪಷ್ಟ ಎಚ್ಚರಿಕೆಯ ನಂತರವೂ ಅನೇಕ ಮಾಧ್ಯಮಗಳು ಸಂಕುಚಿತ ಮನೋಭಾವನೆಯಿಂದ ದ್ವೇಷಕಾರಿಕೊಳ್ಳುತ್ತಿವೆ. ಇಂತಹ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಹಿಂದೆಂದೂ ಕಂಡರಿಯದ ಅನಾರೋಗ್ಯದ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ಎದುಗಾಗಲಿದೆ ಎಂದು ಆತಂಕ ವ್ಯಕ್ತಪಡಿಸಿಡಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 