ಸರ್ಕಾರದ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪಲಿ: ಪಿಡಿ ಕರೀಂ ಅಸದಿ
Let government programs reach deserving beneficiaries: PD Karim Asadi
ಲೋಕದರ್ಶನ ವರದಿ
ಕಾರವಾರ, ಮಾ.18 :- ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜನರಿಗೆ ಅನುಕೂಲವಾಗಲೆಂದು ಅನುಷ್ಠಾನಕ್ಕೆ ತರುವ ಎಲ್ಲ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಬೇಕು ಎಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರರೀಂ ಅಸದಿ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ನಡೆದ ಎನ್.ಆರ್.ಎಲ್.ಎಮ್. ಕೃಷಿ ಸಖಿ ಮತ್ತು ಪಶು ಸಖಿ ಅವರಿಗಾಗಿ ಆಯೋಜಿಸಿದ್ದ ಪ್ರಗತಿ ಪರೀಶೀಲನೆ ಸಭೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಸಖಿಗಳು ಕೃಷಿ ಇಲಾಖೆಯಡಿ ಮಣ್ಣು ಪರೀಕ್ಷೆ, ಆತ್ಮ ಯೋಜನೆ, ಮಿಶ್ರ ಬೆಳೆಗಳು, ಹನಿ ನೀರಾವರಿ, ಸಾವಯವ ಕೃಷಿ, ಬೆಳೆ ವಿಮೆ, ಕೃಷಿ ಯಾಂತ್ರೀಕರಣದ ಕುರಿತು ಮಾಹಿತಿ ಪಡೆದು, ತಮಗೆ ನಿಯೋಜಿಸಿದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿಕರಿಗೆ ಮಾಹಿತಿ ನೀಡಬೇಕು. ಪಶು ಸಖಿಗಳು ಪಶುಸಂಗೋಪನೆ ಇಲಾಖೆಯಡಿ ಜಾನುವಾರು ಲಸಿಕಾ ಕಾರ್ಯಕ್ರಮ, ದೇಶಿ ತಳಿಗಳ ಅಭಿವೃದ್ಧಿಗೆ ಪ್ರೋತ್ಸಾಹ, ರಾಷ್ಟ್ರೀಯ ಗೋಕುಲ ಮಿಷನ್, ಕಾಲುಬಾಯಿ ರೋಗದ ಕುರಿತು ಜಾಗೃತಿ, ಜಾನುವಾರು ವಿಮೆ, ಮೇವು ಸೇರಿದಂತೆ ವಿವಿಧ ಮಾಹಿತಿ ಪಡೆದುಕೊಂಡು ಪಶುಪಾಲಕರಿಗೆ ಅರಿವು ಮೂಡಿಸಬೇಕು ಎಂದರು.
ಕೃಷಿ ಇಲಾಖೆಯ ಉಪ ನಿರ್ದೇಶಕಿ ಪ್ರತಿಭಾ ಹೂಗಾರ ಹಾಗೂ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನದಾಫ್ ಕೃಷಿ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯಡಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಮ್. ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ನಾಗರಾಜ ಕಲ್ಮನೆ ಸೇರಿದಂತೆ ಜಿಲ್ಲಾ ಸಮಾಲೋಚಕರು, ಎಲ್ಲಾ ತಾಲೂಕುಗಳ ಕೃಷಿ ಸಖಿ ಹಾಗೂ ಪಶು ಸಖಿಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 