ಗುಜ್ಜಲ ನಾಗರಾಜಗೆ ಎಂಪಿ ಟಿಕೆಟ್ ನೀಡುವಲ್ಲಿ ಹೈಕಮಾಂಡ್ ಮುಂದಾಗಲಿ

ಕಂಪ್ಲಿ12 ಇಲ್ಲಿನ ಐತಿಹಾಸಿಕ ಸೋಮಪ್ಪ ದೇವಸ್ಥಾನದ ಆವರಣದಲ್ಲಿ ಬುಧವಾರ ಯುವ ಕಾಂಗ್ರೇಸ್ ಕಾರ್ಯಕರ್ತರ ಸಂಘಟನಾ ಸಭೆ ಜರುಗಿತು.  ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಮೀಡಿಯಾ ಸೆಲ್ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ಕಾಂಗ್ರೇಸ್ ಪಕ್ಷಕ್ಕಾಗಿ ಹಗಲು ಇರಳು ಶ್ರಮಿಸಿದ್ದಾರೆ ಮುಂಬರುವ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಜ್ಜಲ ನಾಗರಾಜ ಇವರಿಗೆ ಬಳ್ಳಾರಿ ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ನೀಡುವಲ್ಲಿ ಹೈಕಕಮಾಂಡ್ ಮುಂದಾಗಬೇಕು. ಈ ದಿಸೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಿಯೋಗ ಮೂಲಕ ತೆರಳಿ ಹೈಕಮಾಂಡನ್ನು ಒತ್ತಾಯಿಸಲಾಗುವುದು. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು, ಜನಹಿತ ಕಾರ್ಯಕ್ರಮ, ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯುವ ಕಾರ್ಯಕರ್ತರು ನಿಸ್ವಾರ್ಥವಾಗಿ ಸೇವೆ ಸಲ್ಲಿಸಬೇಕು. ಕಾರ್ಯಕರ್ತರು ತಳಮಟ್ಟದಿಂದ ಸಂಘಟಿತರಾಗಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.  

ಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾದ ಬಿ.ವಿ.ಗೌಡ, ಬಡಿಗೇರ ಜಿಲಾನ್‌ಸಾಬ್, ಪ್ರಕಾಶ್ ಖಂಡೇಲವಾಲ್, ಮೆಟ್ರಿ ಎರಿ​‍್ರಸ್ವಾಮಿ, ಕಾಳಿಂಗವರ್ಧನ ಹಾದಿಮನಿ, ಹೊನ್ನೂರಸ್ವಾಮಿ, ಪ್ರಶಾಂತ್, ಲಿಂಗಣ್ಣ, ಎಚ್‌.ಲಿಂಗೇಶ್, ಹನುಮೇಶ್ ಸೇರಿ ಯುವ ಕಾಂಗ್ರೆಸ್ ಕಾರ್ಯಕರ್ತರಿದ್ದರು.