ಗೃಹ ಸಚಿವ ಅಮಿತ್ ಷಾ ಗೆ ಮೆಹಬೂಬಾ ಮುಫ್ತಿ ಪುತ್ರಿ ಪತ್ರ
ಶ್ರೀನಗರ, ಆಗಸ್ಟ್ 16 ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಾರಗಳೆ ಕಳೆದಿವೆ.
ಈ ಘಟನೆ ನಡೆದಾಗಿನಿಂದ ಮೆಹಬೂಬಾ ಮುಫ್ತಿ ಪುತ್ರಿ ಇಲ್ಟಿಜಾ ಜಾವೇದ್ ಸರ್ಕಾರದ ಕ್ರಮದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೊಸದಾಗಿ ಅವರು, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ತಮ್ಮ ವಾಯ್ಸ್ ಮೇಲ್ ಅನ್ನು ಸಹ ಬಿಡುಗಡೆಗೊಳಿಸಿದ್ದಾರೆ.
ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರೆ, ನಮಗೆ ಮಾತ್ರ ಆ ಅವಕಾಶವೇ ಇಲ್ಲ. ಪ್ರಾಣಿಗಳನ್ನು ಕೂಡಿಹಾಕುವಂತೆ ನಮ್ಮನ್ನು ಬಂಧಿಸಿಡಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ನನ್ನನ್ನು ಕೂಡ ನಿರ್ಬಂಧಿಸಿದ್ದಾರೆ. ಕರ್ಪ್ಯೋ ಜಾರಿಗೊಂಡಂದಿನಿಂದ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮಾಧ್ಯಮಗಳಿಗೆ ಹೇಳಿದ್ದಕ್ಕೆ ನನಗೆ ನಿರ್ಬಂಧ ವಿಧಿಸಿ, ಬೆದರಿಸುತ್ತಿದ್ದಾರೆ. ಅದಕ್ಕಾಗಿಯೇ ನಾನು ಮತ್ತೊಮ್ಮೆ ಮಾಧ್ಯಮಗಳೊಂದಿಗೆ ಮಾತನಾಡಲು ಬಯಸುತ್ತೇನೆ. ನನ್ನನ್ನು ಅಪರಾಧಿ ಎಂದು ಪರಿಗಣಿಸಲಾಗುತ್ತದೆ. ನನ್ನ ಜೀವದ ಬಗ್ಗೆ ಭಯ ಉಂಟಾಗಿದೆ ಎಂದು ವಾಯ್ಸ್ ಮೇಲ್ ನಲ್ಲಿ ತಿಳಿಸಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 