ಬೆಂಗಳೂರು-ಕಲಬುರಗಿ ವಿಮಾನ ಯಾನ ಸೇವೆ ಮುಂದುವರಿಕೆಗೆ ಹೊಸ ಬಿಡ್ ಆಹ್ವಾನಿಸಲು ಕೇಂದ್ರಕ್ಕೆ ಪತ್ರ: ಸಚಿವ ಎಂ. ಬಿ. ಪಾಟೀಲ್
Letter to center to invite new bid for continuation of Bangalore-Kalaburgi flight service: Minister
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16: ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಸಂಸ್ಥೆಯ ವಿಮಾನ ಯಾನ ಸೇವೆಯನ್ನು ಮುಂದುವರೆಸಲು ಇಲ್ಲವೇ ಪ್ರಾದೇಶಿಕ ಸಂಪರ್ಕ ಯೋಜನೆಯ (ಗಆಂಓ) ಅಡಿಯಲ್ಲಿ ಇತರ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್ಗಳನ್ನು ಆಹ್ವಾನಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿ ದಿನಾಂಕ: 26.10.2025 ರಂದು ಪತ್ರ ಬರೆಯಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಸೇವೆಯನ್ನು ಒದಗಿಸುತ್ತಿದ್ದ ಮೆ: Ghodawat ಸಂಸ್ಥೆಯು (Star Air) ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಬೇಡಿಕೆಯು ಕಡಿಮೆಯಾಗಿರುವ ಕಾರಣ ದಿ 15.10.2025 ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 