ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ
Lightning strikes coconut tree, sets it on fire
ಲೋಕದರ್ಶನ ವರದಿ
ಹೂವಿನಹಡಗಲಿ 22: ಪಟ್ಟಣ ಸೇರಿದಂತೆ ತಾಲ್ಲೂಕಿನ ನಾನಾ ಕಡೆಗಳಲ್ಲಿ ಮಂಗಳವಾರ ಸಂಜೆ ಗುಡುಗು, ಸಿಡಿಲು, ಗಾಳಿ, ಮಳೆ ಸುರಿದಿದ್ದು, ನದಿ ತೀರದ ಭತ್ತ,ಬಾಳೆ ಬೆಳೆಗಳಿಗೆ ಹಾನಿಯಾಗಿ ಲಕ್ಷಾಂತರ ನಷ್ಟವಾಗಿದೆ. ಪಟ್ಟಣದ 10ನೇ ವಾರ್ಡ್ ಸೊಪ್ಪಿನ ಕಾಳಮ್ಮ ಬಡಾವಣೆಯ ಜನವಸತಿಗೆ ಹೊಂದಿಕೊಂಡಿರುವ ಹುಚ್ಚಿ ಉಮಾಪತಿ ಅವರ ತೋಟದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಅದು ಹೊತ್ತಿ ಉರಿಯಿತು. ಸಂಜೆ ಗುಡುಗು, ಮಿಂಚು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ತುಂತುರು ಮಳೆ ಸುರಿಯಿತು. ಈ ವೇಳೆ ತೆಂಗಿನ ಮರಕ್ಕೆ ಸಿಡಿಲು ಎರಗಿ ಬೆಂಕಿ ಹೊತ್ತಿಕೊಂಡಿತು. 30 ನಿಮಿಷ ಕಾಲ ಮರ ಹೊತ್ತಿ ಉರಿಯಿತು. ಕೆಲವರು ಆ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದರು.ಈ ವೇಳೆ ತುಂತುರು ಮಳೆ ಸುರಿದಿದ್ದರಿಂದ ಮರದಲ್ಲಿನ ಬೆಂಕಿ ನಂದಿತು. ಸಿಡಿಲ ಸದ್ದಿಗೆ ಬಡಾವಣೆ ನಿವಾಸಿಗಳು ಬೆಚ್ಚಿ ಬಿದ್ದರು.ಸೋಮವಾರ ರಾತ್ರಿಯೂ ಹರಪನಹಳ್ಳಿ ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆ ಸುರಿದಿತ್ತು. ತಾಲ್ಲೂಕಿನ ಹಲುವಾಗಲು ಗ್ರಾಮದ ಕೆಇಬಿ ಕಚೇರಿ ಬಳಿಯ ಬಡಾವಣೆಯಲ್ಲಿ ಹಾವೇರಿ ವಿರೂಪಾಕ್ಷಪ್ಪ ಎಂಬುವವರ ಮನೆಯ ತಗಡಿನ ಚಾವಣಿ ಗಾಳಿಗೆ ಹಾರಿ ಮುರಿದು ಬಿದ್ದಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 