ಮಕ್ಕಳಿಗೆ ಅಕ್ಷರ ಜ್ಞಾನದೊಂದಿಗೆ ಸಂಸ್ಕಾರವು ಅವಶ್ಯ: ಬಾಲಶೇಖರ ಬಂದಿ
Literacy is essential for children: Balasekhara Bandi
ಲೋಕದರ್ಶನ ವರದಿ
ಮಕ್ಕಳಿಗೆ ಅಕ್ಷರ ಜ್ಞಾನದೊಂದಿಗೆ ಸಂಸ್ಕಾರವು ಅವಶ್ಯ: ಬಾಲಶೇಖರ ಬಂದಿ
ಮೂಡಲಗಿ 28: ಶಾಲಾ ಮಕ್ಕಳಿಗೆ ಕೇವಲ ಅಕ್ಷರ ಕಲಿಸಿದರೆ ಸಾಲದು ಅದರೊಂದಿಗೆ ಸಂಸ್ಕಾರವು ಅವಶ್ಯವಿದೆ ಎಂದು ಸಾಹಿತಿ ಹಾಗೂ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.
ತಾಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 33ನೇ ವಾರ್ಷಿಕೋತ್ಸವ ಹಾಗೂ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಮಕ್ಕಳಲ್ಲಿಯ ಸುಪ್ತ ಪ್ರತಿಭೆಯನ್ನು ಬೆಳಕಿಗೆ ತರುವ ಕಾರ್ಯವನ್ನು ಶಿಕ್ಷಣ ಮಾಡುತ್ತದೆ ಎಂದರು.
ಅರಭಾವಿಯ ಆಂಜನೇಯ ಪ್ರಾಥಮಿಕ ಶಾಲೆಯು ಗ್ರಾಮೀಣ ಭಾಗದ ಅನೇಕ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶ್ಲಾಘನೀಯ ಕಾರ್ಯ ಮಾಡಿದೆ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರ ಬಿಲಕುಂದಿ ಅವರು ಶಾಲೆಯ ಪ್ರಗತಿಯಲ್ಲಿ ಪರಿಶ್ರಮವು ಸಾರ್ಥಕವಾಗಿದೆ ಎಂದರು.
ಮುಖ್ಯ ಅತಿಥಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಬಿ. ಮಲಬನ್ನವರ ಮಾತನಾಡಿ ಗ್ರಾಮೀಣ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸರ್ಕಾರವು ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಚಿತ್ರ ನಟಿ ನಿರ್ಮಾಪಕಿ ಶಿವಲೀಲಾ ಮಾಸೂರ, ಯೋಗ ಪಟು ಸಂಜು ಘೋಡಗೇರಿ, ಮಲ್ಲಕಂಭದಲ್ಲಿ ಸಾಧನೆ ಮಾಡಿರುವ ಶಿವಪ್ರಸಾದ ಕಡಾಡಿ, ಪ್ರವೀಣ ಮರನೂರ, ಮಿಥುನ ಪಾಟೀಲ, ತರಬೇತುದಾರ ಮೆಹಬೂಬ ಬಂಡಿವಾಡ, ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಅನುಪಮಾ ಬೆಣ್ಣಿ, ಪ್ರೀಯಂಕಾ ಪಾತ್ರೋಟ, ಹರ್ಷಿತಾ ಮುತ್ತಲಗೇರಿ, ಭೀಮಶಿ ಸಂಪಗಾರ ಅವರನ್ನು ಸನ್ಮಾನಿಸಿದರು. ಶಿವಯ್ಯ ಸ್ವಾಮಿಗಳು ಸಾನ್ನಿಧ್ಯವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಶಂಕರ ಬಿಲಕುಂದಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮಾದರ, ಉಪಾಧ್ಯಕ್ಷೆ ರಾಜೇಶ್ವರಿ ಗಂಗನ್ನವರ, ಮುಖ್ಯಾಧಿಕಾರಿ ವಿನಾಯಕ ಬಬಲೇಶ್ವರ, ಶಿಕ್ಷಕ ಗಣಪತಿ ಉಪ್ಪಾರ ವೇದಿಕೆಯಲ್ಲಿದ್ದರು.
ಮುಖ್ಯ ಶಿಕ್ಷಕ ಎಂ.ಜೆ. ಜೈನ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 