ಆರೋಪ ಹೊತ್ತ ಕೈದಿಗಳಿಗೆ ಸಾಹಿತ್ಯ ಊರುಗೋಲು-ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ
Literature is a crutch for accused prisoners - IGP Dr. B.R. Ravikantegowda
ಹಾವೇರಿ 19 : ಅಪರಾಧ ಆರೋಪ ಹೊತ್ತ ಕೈದಿಗಳಿಗೆ ಸಾಹಿತ್ಯ ಊರುಗೋಲಾಗುತ್ತದೆ ಎಂದು ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಹೇಳಿದರು.
ಹಾವೇರಿ ಜೈಲಿನಲ್ಲಿ ಗುರುವಾರ ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮೂರು ದಿನಗಳವರೆಗೆ ಹಮ್ಮಿಕೊಳ್ಳಲಾದ ಕೈದಿಗಳಿಗೆ ಸಾಹಿತ್ಯ ಕಮ್ಮಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಗಿಸಿ ಅವರು ಮಾತನಾಡಿದರು.
ಮೂರು ದಿನಗಳ ಸಾಹಿತ್ಯ ಕಮ್ಮಟದ ಸದುಪಯೋಗಪಡೆದುಕೊಳ್ಳಿ. ಭಜನೆ ನಂತರ ಕೊಡುವ ಪ್ರಸಾದವನ್ನು ತಿಂದು ಕೈ ಒರೆಸಿಕೊಂಡ ಹಾಗೆ ಮಾಡದೆ, ನಿಮ್ಮ ಬದುಕನ್ನು ಒರೆಗೆ ಹಚ್ಚಿರಿ. ಜೊತೆಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಸಿಟ್ಟನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಸಿಟ್ಟಿನ ಮನುಷ್ಯರಾಗಿದ್ದ ನನ್ನ ತಂದೆ ಹಾಗೂ ಕಥೆಗಾರ ಡಾ.ಬೆಸಗರಹಳ್ಳಿ ರಾಮಣ್ಣ ಸಾಹಿತ್ಯ ಓದದಿದ್ದರೆ ಕ್ರಿಮಿನಲ್ ಆಗುತ್ತಿದ್ದೆ ಎಂದು ಹೇಳುತ್ತಿದ್ದರು. ಸಿಟ್ಟಿನ ನಿಯಂತ್ರಣಕ್ಕೆ ಮತ್ತು ಬದುಕು ಕಟ್ಟಿಕೊಳ್ಳಲು ಸಮೃದ್ಧವಾದ ಸಾಹಿತ್ಯ ಓದಿರಿ ಎಂದು ಕಿವಿಮಾತು ಹೇಳಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 