ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂಕೋರ್ಟನಲ್ಲಿ ದಾವೆ
ನವದೆಹಲಿ,12 ಸಂಸತ್ತಿನಲ್ಲಿ
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರದ ಸಿಂಧುತ್ವ
ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ದಾವೆ ಭಾರತೀಯ
ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನಿರ್ಧರಿಸಿದೆ. ಸಂಸತ್ತಿನಲ್ಲಿ ಬುಧವಾರ ಮಸೂದೆ ಅಂಗೀಕಾರವಾದ
ನಂತರ ಸರಕಾರಕ್ಕೆಈಗ ಹೊಸ ಕಾನೂನು ಸಮಸ್ಯೆ ಎದುರಾಗಲಿದೆ
. ಪೌರತ್ವ ಮಸೂದೆ ಒಮ್ಮೆ ಸಂಸತ್ತಿನಲ್ಲಿ ಅಂಗೀಕಾರವಾದ ತಕ್ಷಣ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಐಯುಎಂಎಲ್ ಈ ಹಿಂದೆಯೇ ಹೇಳಿತ್ತುಧರ್ಮ ಆಧಾರಿತ ಪೌರತ್ವ
ಮಸೂದೆ ಜಾರಿಗೆ ತರುವ ಮೂಲಕ ಈ ಮಸೂದೆ ಸಂವಿಧಾನದ
14ನೇ ವಿಧಿಯನ್ನು ಉಲ್ಲಂಘನೆ ಮಾಡಿದೆ ಎಂದೂ ಅರ್ಜಿಯಲ್ಲಿ
ಆರೋಪಿಸಲಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯು ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ
ಧಾರ್ಮಿಕ ಕಿರುಕುಳ, ದೌರ್ಜನ್ಯಕ್ಕೆ ಒಳಗಾದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲು
ಅವಕಾಶ ಕಲ್ಪಿಸಲಿದೆ. ಪೌರತ್ವ ಮಸೂದೆ ಗೆ ಬುಧವಾರ
ರಾಜ್ಯಸಭೆ ಸಹ ಅಂಗೀಕಾರ ನೀಡಿದ್ದು ಇದರಿಂದ ಮಸೂದೆಗೆ
ಸಂಸತ್ತಿನ ಎರಡೂ ಸದನಗಳ ಅನುಮೋದನೆ ದೊರಕಿದಂತಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 