ದೇಶದ ಸತ್ಪ್ರಜೆಗಳಾಗಿ ಬಾಳಿರಿ: ಶ್ರೀ ಪಿ ಗಾದೆಪ್ಪ
Live as good citizens of the country: Shri P. Gadeppa
ಲೋಕದರ್ಶನ ವರದಿ
ಬಳ್ಳಾರಿ 15: ವಿದ್ಯಾರ್ಥಿ ಜೀವನ ಬಂಗಾರದ ದಿನಗಳ ಜೀವನ, ನೀವು ನಿಮ್ಮ ಪದವಿ ಮುಗಿಸಿಕೊಂಡು ಇನ್ನೂ ಉನ್ನತ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉದ್ಯೋಗ ಪಡೆದು ನಿಮ್ಮ ತಾಯಿ ತಂದೆಗಳಿಗೆ, ವಿದ್ಯೆ ಕಲಿಸಿದ ಸಂಸ್ಥೆಗೆ ಹೆಸರು ತರುವಂತಹ ಈ ದೇಶದ ಸತ್ಪ್ರಜೆಗಳಾಗಿ ಬಾಳಿರಿ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀ ಪಿ ಗಾದೆಪ್ಪ ಅವರು ಅಭಿಪ್ರಾಯ ಪಟ್ಟರು. ಶನಿವಾರ ನಗರದ ಶ್ರೀ ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಲಾರ್ಡ್ಸ್ ವಿದ್ಯಾಸಂಸ್ಥೆಯ ಇಂಡೋ-ಅಮೆರಿಕನ್ ಪದವಿ ಕಾಲೇಜು ವಿದ್ಯಾರ್ಥಿಗಳ ಬಿಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಆರಂಭದಲ್ಲಿ ಲಾರ್ಡ್ಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪಿ ಎಚ್ ನಾಯ್ಡು ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ಇಂದು ಂಋು (ಕೃತಕ ಬುದ್ಧಿಮತ್ತೆ) ಅವಶ್ಯಕತೆ ತುಂಬಾ ಇದ್ದು ಇದರ ಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಇಂದಿನ ಂಋ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ಕರೆಕೊಟ್ಟು ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯ ಸುಖಮಯವಾಗಿರಲಿ ಎಂದು ಆಶಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 