ಬೆಳಗಾವಿ 13: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ ದಿನಾಂಕ 14ನೆ ಜೂನ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ “ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನ” ಕುರಿತು ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯ ಮಾಪನ) ಡಾ. ಟಿ. ಎನ್. ಶ್ರೀನಿವಾಸ ಹಾಗೂ ವಿಟಿಯು ಶೈಕ್ಷಣಿಕ ವಿಶೇಷ ಅಧಿಕಾರಿ ಪ್ರೋ. ಸದಾಶಿವ ಹಾಲಭಾವಿ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸೂಕ್ತವಾದ ಕೋರ್ಸ್ಗಳ ಆಯ್ಕೆ ಮತ್ತು ವೃತ್ತಿ ಮಾರ್ಗದರ್ಶನ ಕುರಿತ ಮಾಹಿತಿಗೆ ತಜ್ಞರೊಂದಿಗೆ ಮಾತನಾಡಲು 9019904904 ಸಂಖ್ಯೆಗೆ ಕರೆ ಮಾಡಬಹುದು. ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.