ಲಾಕ್ ಡೌನ್ ಎಫೆಕ್ಟ್: ತವರಿಗೆ ತೆರಳಲಾಗದೆ ಕೇರಳದ ವ್ಯಕ್ತಿ ಆತ್ಮಹತ್ಯೆ
ಚಾಮರಾಜನಗರ, ಜೂ 12,ಲಾಕ್ಡೌನ್ನಿಂದಾಗಿ ತನ್ನ ಊರಿಗೆ ತೆರಳಲಾಗದೇ ಹತಾಶೆಗೊಂಡಿದ್ದ ಕೇರಳ ಮೂಲದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.ಕೇರಳದ ಮಲ್ಲಪ್ಪುರಂನ ನಿವಾಸಿ ಅಂಜುಂ (35) ಎಂಬುವವರು ಹೋಟೆಲ್ ನ ಕೋಣೆಯೊಂದರಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಅಂಜುಂ, ನಗರದ ಮಯೂರ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕೊರೊನಾ ಲಾಕ್ಡೌನ್ನಿಂದಾಗಿ ಅವರು ಕಳೆದೆರಡು ತಿಂಗಳಿಂದ ಹೋಟೆಲ್ ನಲ್ಲೇ ತಂಗಿದ್ದರು. ಕೆಲ ದಿನಗಳಿಂದ ತನ್ನನ್ನು ಊರಿಗೆ ಕಳುಹಿಸಿಕೊಡುವಂತೆ ಮಾಲೀಕರಿಗೆ ಒತ್ತಾಯಿಸಿದ್ದನು. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ಕೇರಳಕ್ಕೆ ಬಸ್ಸು ಸಂಚಾರ ಇಲ್ಲದಿರುವುದರಿಂದ ಸದ್ಯ ಕಳುಹಿಸಿಕೊಡಲು ಆಗುವುದಿಲ್ಲ. ಬಸ್ಸು ಸಂಚಾರ ಆರಂಭವಾದ ಬಳಿಕ ಕಳುಹಿಸಿಕೊಡುವುದಾಗಿ ಹೋಟೆಲ್ ಮಾಲೀಕರು ಆತನಿಗೆ ತಿಳಿಸಿದ್ದರು ಎನ್ನಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 