ಲಾಕ್ ಡೌನ್ ಎಫೆಕ್ಟ್: ತವರಿಗೆ ತೆರಳಲಾಗದೆ ಕೇರಳದ ವ್ಯಕ್ತಿ ಆತ್ಮಹತ್ಯೆ
ಚಾಮರಾಜನಗರ, ಜೂ 12,ಲಾಕ್ಡೌನ್ನಿಂದಾಗಿ ತನ್ನ ಊರಿಗೆ ತೆರಳಲಾಗದೇ ಹತಾಶೆಗೊಂಡಿದ್ದ ಕೇರಳ ಮೂಲದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.ಕೇರಳದ ಮಲ್ಲಪ್ಪುರಂನ ನಿವಾಸಿ ಅಂಜುಂ (35) ಎಂಬುವವರು ಹೋಟೆಲ್ ನ ಕೋಣೆಯೊಂದರಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಅಂಜುಂ, ನಗರದ ಮಯೂರ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಕೊರೊನಾ ಲಾಕ್ಡೌನ್ನಿಂದಾಗಿ ಅವರು ಕಳೆದೆರಡು ತಿಂಗಳಿಂದ ಹೋಟೆಲ್ ನಲ್ಲೇ ತಂಗಿದ್ದರು. ಕೆಲ ದಿನಗಳಿಂದ ತನ್ನನ್ನು ಊರಿಗೆ ಕಳುಹಿಸಿಕೊಡುವಂತೆ ಮಾಲೀಕರಿಗೆ ಒತ್ತಾಯಿಸಿದ್ದನು. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ಕೇರಳಕ್ಕೆ ಬಸ್ಸು ಸಂಚಾರ ಇಲ್ಲದಿರುವುದರಿಂದ ಸದ್ಯ ಕಳುಹಿಸಿಕೊಡಲು ಆಗುವುದಿಲ್ಲ. ಬಸ್ಸು ಸಂಚಾರ ಆರಂಭವಾದ ಬಳಿಕ ಕಳುಹಿಸಿಕೊಡುವುದಾಗಿ ಹೋಟೆಲ್ ಮಾಲೀಕರು ಆತನಿಗೆ ತಿಳಿಸಿದ್ದರು ಎನ್ನಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 