ಜಮೀನಿಗೆ ಕೃಷಿ ಅಧಿಕಾರಿ ಎಂ.ದೇವರಾಜ್ ಭೇಟಿ ನೀಡಿ ಪರಿಶೀಲನೆ
ಕುರುಗೋಡು08: ಮಣ್ಣಿನ ಫಲವತ್ತತೆ ಹೆಚ್ಚಾಗಲು ಹಸಿರು ಎಲೆ ಗೊಬ್ಬರ ರೈತರಿಗೆ ಸಹಕಾರಿಯಾಗುತ್ತಿದೆ ಎಂದು ಕೃಷಿ ಅಧಿಕಾರಿ ಎಂ.ದೇವರಾಜ್ ಹೇಳಿದರು.
ಪಟ್ಟಣ ಸಮೀಪದ ಮುಷ್ಟಗಟ್ಟೆ ಗ್ರಾಮದಲ್ಲಿ ಸುಣಗಾರ ನಾಗಪ್ಪ ಎಂಬ ರೈತ ಬೆಳೆದ ಹಸಿರು ಎಲೆ ಗೊಬ್ಬರದ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ರೈತರು ಹಸಿರು ಎಲೆ ಗೊಬ್ಬರ ಬೆಳೆಯುವುದರಿಂದ ಮಣ್ಣಿನಲ್ಲಿ ಸೂಕ್ಷ್ಮಣ ಜೀವಿಗಳು ಹೆಚ್ಚಾಗಿ ಮಣ್ಣಿನಲ್ಲಿ ರೋಗ ನಿರೋಧಕ ಶಕ್ತಿ ಅಧಿಕವಾಗುತ್ತದೆ ಆದ್ದರಿಂದ ರೈತರು ಅಧಿಕ ಸಂಖ್ಯೆಯಲ್ಲಿ ಹಸಿರು ಎಲೆಗೊಬ್ಬರದ ಬೆಳೆಯನ್ನು ಬೆಳೆಯಲು ಮುಂದಾಗಬೇಕೆಂದು ತಿಳಿಸಿದರು. ಅಲ್ಲದೆ ಹಸಿರು ಎಲೆ ಗೊಬ್ಬರ ಬೆಳೆಯನ್ನು ಬೆಳೆಯಲು ಕೃಷಿ ಇಲಾಖೆಯಿಂದ ಪ್ರೋತ್ಸಾಹ ಧನ ಸಿಗುವುದು ರೈತರಿಗೆ ಸಂತಸ ಮೂಡಿಸಿದೆ ಎಮದರು.
ನಂತರ ಹಸಿರು ಎಲೆಗೊಬ್ಬರ ಬೆಳೆಗಾರ ಸುಣಗಾರ ನಾಗಪ್ಪ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತ ಅಂಜೀನಪ್ಪ, ಪೊಂಪಾಪತಿ, ಶಾಂತಪ್ಪ, ಹೆಚ್.ವೀರಾಪುರ ಚಿದಾನಂದಪ್ಪ, ಕೆರೆಕೆರೆ ಹನುಮಂತಪ್ಪ ಸೇರಿದಂತೆ ಇತರೆ ರೈತರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 