ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
MES high-level meeting with Maha CM cancelled: Jhapa leaders return empty-handed
ಬೆಳಗಾವಿ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಜೊತೆಗೆ ಸಭೆ ಮಾಡಲು ತೆರಳಿದ್ದ ಬೆಳಗಾವಿಯ ಝಾಪಾ ಮುಖಂಡರು ಉನ್ನತಾಧಿಕಾರ ಸಭೆ ರದ್ದಾದ ಹಿನ್ನೆಲೆಯಲ್ಲಿ ಮುಂಬಯಿಯಿಂದ ಬರಿಗೈಯಿಂದ ಬೆಳಗಾವಿಗೆ ವಾಪಸ್ಸಾಗಿದ್ದಾರೆಂದು ತಿಳಿದುಬಂದಿದೆ. ಮಹಾರಾಷ್ಟ್ರ ಸಿಎಂ ಅವರು ಬೆಳಗಾವಿ ಝಾಪಾ ಮುಖಂಡರಿಗೆ ಕೈಕೊಟ್ಟರಾ ಎನ್ನುವ ಕುರಿತು ಗುಸು ಗುಸು ಚರ್ಚೆ ಶುರುವಾಗಿದೆ. ಸಭೆ ರದ್ದಾದ ಹಿನ್ನೆಲೆಯಲ್ಲಿ ಝಾಪಾ ಮುಖಂಡರು ಅಸಮಾಧಾನಗೊಂಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಮುಂಬಯಿನ ಕಾರ್ಯಾಲಯದಲ್ಲಿ ಗಡಿ ವಿಷಯ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚೆಯ ಕುರಿತು ಸಿಎಂ ಫಡ್ನವಿಸ್ ಅವರ ನೇತ್ರತ್ವದಲ್ಲಿ ಜೂನ್ 30ರಂದು ಸಭೆ ನಿಗದಿ ಮಾಡಲಾಗಿತ್ತು.ಆಡಳಿತಾತ್ಮಕ ನೆಪ ನೀಡಿ ರದ್ದು ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕೆಲ ಝಫಾ ಮುಖಂಡರು ಒಂದು ದಿನ ಮುಂಚಿತವಾಗಿ ಮುಂಬಯಿ ತಲುಪಿದ್ದರು. ಇನ್ನೂ ಕೆಲ ಮುಖಂಡರು ಅರ್ಧ ದಾರಿಯಲ್ಲಿ ಇದ್ದರು. ಮುಂಬಯಿನ ಸಭೆ ರದ್ದಾದ ಸುದ್ದಿ ತಿಳಿದ ಅರ್ಧ ದಾರಿಯ ಮುಖಂಡರು ಬಂದ ದಾರಿಗೆ ಸುಂಕವಿಲ್ಲ ಎಂಬ ನಾನುಡಿಯಂತೆ ವಾಪಸು ಬೆಳಗಾವಿಗೆ ಆಗಮಿಸಿದ್ದಾರೆಂದು ತಿಳಿದಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 