ಶಾಸಕ ಅಪ್ಪಾಜಿ ನಾಡಗೌಡರಿಂದ ಬೆಳೆ ಹಾನಿ ವೀಕ್ಷಣೆ
MLA Appaji Nadagowda inspects crop damage
ಶಾಸಕ ಅಪ್ಪಾಜಿ ನಾಡಗೌಡರಿಂದ ಬೆಳೆ ಹಾನಿ ವೀಕ್ಷಣೆ
ತಾಳಿಕೋಟಿ 10: ಸಪ್ಟಂಬರ್ ಮಾಸದಲ್ಲಿ ಈ ಬಾರಿ ವಾಡಿಕೆ ಗಿಂತ ಹೆಚ್ಚು ಸುರಿದ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಹಾನೀಗೀಡಾಗಿದ್ದು, ಇದಕ್ಕಾಗಿ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅರ್ಹ ರೈತರ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ಪರಿಹಾರ ನೀಡಲಾಗುವುದು. ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ಅವರು ಯಾವ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಕೆ ಎಸ್ ಡಿ ಎಲ್ ಅಧ್ಯಕ್ಷ ಶಾಸಕ ಸಿ. ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಶುಕ್ರವಾರ ತಾಲೂಕಿನ ಬಾವೂರು ಗ್ರಾಮ ಪಂಚಾಯತ ವ್ಯಾಪ್ತಿಯ ಜಮೀನುಗಳ ಬೆಳೆ ಹಾನಿ ವೀಕ್ಷಣೆ ಮಾಡಿದ ನಂತರ ಅವರು ಅತಿವೃಷ್ಟಿ ಹಾನಿ ಕುರಿತು ಮಾಹಿತಿ ನೀಡಿದರು.
ಈ ಬಾರಿಯ ಅತಿವೃಷ್ಟಿಯಿಂದಾಗಿ ರೈತರು ಅತಿ ಹೆಚ್ಚು ಬೆಳೆದ ಹತ್ತಿ ಬೆಳೆ ಶೇ. 70ರಷ್ಟು ಹಾನೀಗೀಡಾಗಿದೆ ಹಾಗೂ ತೊಗರಿ ಬೆಳೆಯೂ ಸಹ ಭಾಗಶ ಹಾಳಾಗಿದೆ ಇದರಿಂದ ನಮ್ಮ ರೈತರು ಕಷ್ಟದಲ್ಲಿರುವುದು ನಿಜ ಅವರಿಗೆ ತೊಂದರೆ ಮಾಡಬೇಕು ಬೆಳೆ ಹಾನಿ ಆಗಿರುವ ಪ್ರಮಾಣ ಕಡಿಮೆ ತೋರಿಸಬೇಕು ಎಂಬ ಉದ್ದೇಶ ನಮಗಿಲ್ಲ ನಮ್ಮದು ರೈತ ಪರವಾಗಿರುವ ಸರಕಾರ ರೈತರ ಹಿತ ಚಿಂತನೆ ನಮ್ಮ ಮುಖ್ಯ ಧ್ಯೇಯವಾಗಿದೆ. ಪರಿಹಾರ ನೀಡುವಲ್ಲಿ ಸರ್ಕಾರದ ಮಾನದಂಡಗಳಿವೆ ಅದನ್ನು ನಾವು ಪಾಲಿಸಬೇಕಾಗುತ್ತದೆ, ಆದರೆ ಕೆಲವರು ಇದರಲ್ಲಿಯೂ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಅವರು ತಾವು ಅಧಿಕಾರದಲ್ಲಿದ್ದಾಗ ರೈತರಿಗೆ ಎಷ್ಟೊಂದು ಸುಳ್ಳು ಹೇಳಿ ಮೋಸ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಈಗ ರೈತರಿಗೆ ತಪ್ಪು ಮಾಹಿತಿ ಕೊಟ್ಟು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅವರೊಬ್ಬ ಮಾಜಿ ಶಾಸಕರಾಗಿದ್ದು ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿದೆ. ಜನರು ಅವರಿಗೆ ವಿಶ್ರಾಂತಿ ಪಡೆಯಲು ಅವಕಾಶ ಮಾಡಿಕೊಟ್ಟಿದ್ದಾರೆ ಅವರು ವಿಶ್ರಾಂತಿ ಪಡೆಯಲಿ, ಜನರು ಅವರ ಸೇವೆಗಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ ನಾನು ಆ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇನೆ ಎಂದ ಅವರು ನಮ್ಮ ರೈತರು ಇಂಥವರ ಕುರಿತು ಹೆಚ್ಚು ಜಾಗೃತರಾಗುವ ಅಗತ್ಯವಿದೆ ಎಂದರು.
ತಾಳಿಕೋಟಿ ತಹಶೀಲ್ದಾರ್ ಡಾ.ವಿನಯಾ ಹೂಗಾರ, ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಾವಿಕಟ್ಟಿ, ತಾಂತ್ರಿಕ ಅಧಿಕಾರಿ ರಾಜೇಶ್ವರಿ ನಾಡಗೌಡ,ಕೃಷಿ ಅಧಿಕಾರಿಗಳಾದ ಮಹೇಶ ಜೋಶಿ, ಗೋವಿಂದರೆಡ್ಡಿ ಮೆದಕಿನಾಳ, ಸರ್ಕಲ್ ವಿನೋದ್ ಸಿಂದಗಿ, ಗ್ರಾಮ ಆಡಳಿತಾಧಿಕಾರಿ ಶಬ್ಬೀರ್ ಮುಲ್ಲಾ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 