ಜಿಲ್ಲೆಗಳಿಂದ ಬರುತ್ತಿರುವ ವಾಹನಗಳನ್ನು ನಿಷೇಧಿಸುವಂತೆ ಶಾಸಕ ಬಳ್ಳಾರಿ ಮನವಿ
ಬ್ಯಾಡಗಿ೧೮: ಪಟ್ಟಣದಲ್ಲಿರುವ ಕೋಲ್ಡ್ ಸ್ಟೊರೇಜ್ಗಳಲ್ಲಿ ಒಣ ಮೆಣಸಿನಕಾಯಿ ಚೀಲಗಳನ್ನು ಸಂಗ್ರಹಿಸಿಡಲು ವಿವಿಧ ರಾಜ್ಯ ಹಾಗೂ ರಾಜ್ಯದ ಕೊರೊನಾ ಸೋಂಕಿತ ಜಿಲ್ಲೆಗಳಿಂದ ಬರುತ್ತಿರುವ ವಾಹನಗಳನ್ನು ನಿಷೇಧಿಸುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಹಾವೇರಿಯ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅವರನ್ನು ಭೇಟಿಯಾಗಿ ಮಾತನಾಡಿದ ಅವರು ರಾಜ್ಯದ ಕೊರೋನಾ ವೈರಸ್ ಹಾಟ್ಸ್ಪಾಟ್ ಜಿಲ್ಲೆಗಳಾದ ಬಳ್ಳಾರಿ, ರಾಯಚೂರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಪಟ್ಟಣಕ್ಕೆ ಆಗಮಿಸುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದಿವೆ. ಕಾರಣ ಮುಂಜಾಗ್ರತೆಯ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿಗಳು ಬಳ್ಳಾರಿ ಮತ್ತು ರಾಯಚೂರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಸಂಪಕರ್ಿಸಿ ಬ್ಯಾಡಗಿ ಹಾಗೂ ಹಾವೇರಿ ಜಿಲ್ಲೆಯ ಜನರ ಆರೋಗ್ಯದ ಹಿತ ದೃಷ್ಟಿಯಿಂದ ಒಣ ಮೆಣಸಿನಕಾಯಿ ಚೀಲಗಳನ್ನು ಹೊತ್ತು ತರುವ ವಾಹನಗಳಿಗೆ ಅನುಮತಿ ನೀಡದಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಈವರೆಗೂ ಹಾವೇರಿ ಜಿಲ್ಲೆಯಲ್ಲಿ ಒಂದೇ ಒಂದೂ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗದಿರುವುದು ನಮ್ಮೆಲ್ಲರ ಸುದೈವವಾಗಿದ್ದು, ಇನ್ನೂ ಮುಂದಿನ 15 ದಿನಗಳ ಕಾಲ ಮುನ್ನೆಚ್ಚರಿಕೆಯಲ್ಲಿ ಕಠಿಣ ಕ್ರಮಗಳ ಮೂಲಕ ಲಾಕ್ ಡೌನ್ ಆದೇಶವನ್ನು ಪಾಲನೆಯಾಗುವಂತೆ ಜಿಲ್ಲೆಯಾದ್ಯಂತ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 