ಬ್ಯಾಡಗಿ ಬರಗಾಲ ಪೀಡಿತ ಎಂದು ಘೋಷಿಸಲು ಶಾಸಕ ಬಳ್ಳಾರಿ ಒತ್ತಾಯ
ಬೆಳಗಾವಿ ಅಧಿವೇಶನದಲ್ಲಿ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡುತ್ತಿರುವುದು.
ಲೋಕದರ್ಶನ ವರದಿ
ಬ್ಯಾಡಗಿ 16:- ಬ್ಯಾಡಗಿ ತಾಲೂಕನ್ನು ಬರಗಾಲ ಪೀಡಿತಎಂದು ಶೀಘ್ರವಾಗಿ ಘೋಷಿಸಬೇಕೆಂದು ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಬೆಳಗಾವಿ ಅಧಿವೇಶನದಲ್ಲಿ ಸರಕಾರಕ್ಕೆ ಒತ್ತಾಯಿಸಿದರು.
ದಿನಾಂಕ: 16 ರಂದು ಬೆಳಗಾವಿ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತಾರ ವೇಳೆಯಲ್ಲಿ ಪಕ್ಕದತಾಲೂಕ ಹಿರೇಕೆರೂರ ತಾಲೂಕು ಅರೆಮಲೆನಾಡು ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತಿದ್ದರೂ ಸಹ ಅದನ್ನು ಬರಗಾಲ ಪ್ರದೇಶವೆಂದು ಘೋಷಿಸಿ, ಪಕ್ಕದಲ್ಲಿರುವ ಅತೀ ಹಿಂದುಳಿದ ಬೆಂಗಾಡು ಪ್ರದೇಶವಾಗಿರುವ ಬ್ಯಾಡಗಿ ತಾಲೂಕನ್ನು ಏಕೆ ಬರಗಾಲ ಪೀಡಿತ ಅಂತಾ ಏಕೆ ಘೋಷಣೆ ಮಾಡಿಲ್ಲ. ಈ ತಾರತಮ್ಯಕ್ಕೆ ಕಾರಣವೇನು ? ಇದಕ್ಕೆ ಕೃಷಿ ಸಚಿವರು ಕಂದಾಯ ಸಚಿವರು ತಕ್ಷಣಕ್ರಮಕೈಗೊಂಡು ಬ್ಯಾಡಗಿ ತಾಲೂಕನ್ನು ಬರಗಾಲ ಪೀಡಿತವೆಂದು ಘೋಷಣೆ ಮಾಡಬೇಕು.
ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಜಿಲ್ಲಾಧಿಕಾರಿಗಳ ಅನುಮತಿ ತೆಗೆದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿ ಎಲ್ಲಾ ಜವಾಬ್ದಾರಿಗಳನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿದರೆ ಕೆಲಸವಾಗುವುದು ಹೇಗೆ ? ಆದ್ದರಿಂದಾಟಾಸ್ಕ ಪೋರ್ಸ ಸಮಿತಿಯವರ ವರದಿಯ ಪ್ರಕಾರಕುಡಿಯುವ ನೀರಿಗೆ ಕೊಳವೆಭಾವಿ ತೋಡುವಕ್ರಮ ಕೈಗೊಳ್ಳಬೇಕು ತಕ್ಷಣ ಬರಗಾಲ ಕಾಮಗಾರಿಗಳನ್ನು ಪ್ರಾರಂಭಿಸಿ ಜನರಿಗೆಉದ್ಯೋಗ, ಕುಡಿಯುವ ನೀರಿಗೆ ವ್ಯವಸ್ಥೆ ಮಾಡಬೇಕೆಂದು ಶಾಸಕರು ಸರಕಾರಕ್ಕೆ ಒತ್ತಾಯಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 