70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪತ್ರಕರ್ತರನ್ನು ಸತ್ಕರಿಸಿದ ಶಾಸಕ ಡಿ.ಎಮ್.ಐಹೊಳೆ
MLA D.M. Aihole entertained journalists at the 70th Karnataka Rajyotsava ceremony
70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪತ್ರಕರ್ತರನ್ನು ಸತ್ಕರಿಸಿದ ಶಾಸಕ ಡಿ.ಎಮ್.ಐಹೊಳೆ
ರಾಯಬಾಗ 02: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸೋಣ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶನಿವಾರ ಪಟ್ಟಣದ ಮಹಾದೇವ ಮಂಗಲ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದರ ಜೊತೆಗೆ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.ಮಕ್ಕಳ ಸಾಹಿತಿ ಡಾ.ಲಕ್ಷ್ಮಣ ಚೌರಿ ಅವರು ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಕುರಿತು ಉಪನ್ಯಾಸ ನೀಡಿದರು. ತಹಶೀಲ್ದಾರ ಮಹಾದೇವ ಸನಮುರಿ ಅವರು ಧ್ವಜಾರೋಹಣ ನೆರವೇರಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರ್ಜುನ ಬಂಡಗರ, ತಾ.ಪಂ.ಇಒ ಡಾ.ಸುರೇಶ ಕದ್ದು, ಸಿಪಿಐ ಬಿ.ಎಸ್.ಮಂಟೂರ, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಮ್.ಪಾಟೀಲ, ವಿನೋದ ಮಾವರಕರ, ವಿ.ಎಸ್.ಚಂದರಗಿ, ಸುಭಾಷ ಭಜಂತ್ರಿ, ರವೀಂದ್ರ ಪಾಟೀಲ, ಡಾ.ಎಮ್.ಬಿ.ಪಾಟೀಲ, ಆರಿ್ಬ.ಮನವಡ್ಡರ, ಭಾರತಿ ಕಾಂಬಳೆ, ಕಲ್ಪನಾ ಕಾಂಬಳೆ, ಬಸವರಾಜ ಕಾಂಬಳೆ, ಸುರೇಶ ಮಲಾಜಿ, ವಿನಾಯಕ ಭಾಟೆ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.ಬಿಇಒ ಬಸವರಾಜಪ್ಪ ಆರ್ ಸ್ವಾಗತಿಸಿದರು, ದೈಹಿಕ ಪರೀವೀಕ್ಷಕ ಎಮ್.ಪಿ.ಜೀರಗ್ಯಾಳ ನಿರೂಪಿಸಿದರು.ಬೆಳ್ಳಿಗ್ಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಮಹಾದೇವ ಮಂಗಲ ಕಾರ್ಯಾಲಯದವರೆಗೆ ವಾದ್ಯಮೇಳದೊಂದಿಗೆ ಕನ್ನಡ ತಾಯಿ ಭುವನೇಶ್ವರ ಭಾವಚಿತ್ರ ಮೆರವಣಿಗೆ ನಡೆಯಿತು.ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು, ಸಾಹಿತಿಗಳನ್ನು ಮತ್ತು ಪತ್ರಕರ್ತರನ್ನು ಸತ್ಕರಿಸಲಾಯಿತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 