ಬೇಸಿಗೆ ಬಿಸಿಲಿನಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ನೆರಳಾದ ಶಾಸಕ ಲಕ್ಷ್ಮಣ ಸವದಿ
MLA Lakshman Savadi provides shade for street vendors in the summer heat
ಅಥಣಿ 11: ದಿನೆ ದಿನೇ ಬೇಸಿಗೆ ಬಿಸಿಲಿನ ತಾಪ ಹೆಚ್ಚು ಆಗುತ್ತದೆ ರಸ್ತೆ ಬದಿಯಲ್ಲಿ ದಿನ ನಿತ್ಯ ಬಿಸಿಲಿನಲ್ಲಿ ದುಡಿಯುತ್ತಿರುವ ಬಡ ಜನರ ಕಷ್ಟವನ್ನು ನೋಡಿದ ಶಾಸಕ ಲಕ್ಷ್ಮಣ ಸವದಿ ಅವರು, ನನ್ನ ಜನರಿಗೆ ಯಾವುದೇ ಕಾರಣಕ್ಕೂ ಬಿಸಿಲಿನಲ್ಲಿ ಕಷ್ಟ ಆಗಬಾರದು ಎಂದು ಮನ ಗೊಡು ಲಕ್ಷ್ಮಣ ಸವದಿ ಫೌಂಡೇಶನ್ ವತಿಯಿಂದ ಪಟ್ಟಣದ ಬೀದಿ ಬದಿಯಲ್ಲಿ ಕುಳಿತು ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಸ್ಥರಿಗೆ ಮಳೆ ಹಾಗೂ ಸುಡು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಲಕ್ಷ್ಮಣ ಸವದಿ ಅಭಿಮಾನಿಗಳು ಉತ್ತಮ ಗುಣ ಮಟ್ಟದ ಕೊಡೆಗಳನ್ನು ವಿತರಿಸಿದರು.
ಈ ವೇಳೆ ಬೀದಿ ಬದಿ ವ್ಯಾಪಾರಸ್ಥೆ ಮಾತನಾಡಿ ಇವತ್ತು ನಮ್ಮ ಬೀದಿಬದಿ ವ್ಯಾಪಾರಸ್ಥರಿಗೆ ಹಬ್ಬದಂತಾಗಿದೆ ಏಕೆಂದರೆ ಇಷ್ಟು ದಿನ ಯಾರು ಕೂಡ ಬೀದಿ ಬದಿ ವ್ಯಾಪಾರಸ್ಥರಿಗೆ ಸರಿಯಾಗಿ ಮಾತನಾಡಿ ಸುತ್ತಿರಲಿಲ್ಲ ಆದರೆ ಇವತ್ತು ನಮ್ಮ ಹೆಮ್ಮೆಯ ಶಾಸಕರಾದ ಲಕ್ಷ್ಮಣ ಸವದಿ ಹಾಗೂ ಯುವ ನಾಯಕ ಚಿದಾನಂದ ಸವದಿ ಅವರು ಬೀದಿ ಬದಿ ವ್ಯಾಪಾರಸ್ಥರ ಪರಿಸ್ಥಿತಿಯನ್ನು ಅರಿತು ಬೇಸಿಗೆ ಬೇಗೆಯಿಂದ ರಕ್ಷಿಸಿ ಕೊಳ್ಳಲು ಕೋಡೆಗಳನ್ನು ನೀಡುವ ಮೂಲಕ ಬೀದಿಬದಿ ವ್ಯಾಪಾರಸ್ಥರಿಗೆ ನೆರಳನ್ನು ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಮಲ್ಲೇಶ ಹುದ್ದಾರ, ರಾಜಶೇಖರ ಗುಡೋಡಗಿ, ಧುರೀಣರಾದ ಶಿವರುದ್ರ ಘೂಳಪ್ಪನವರ, ರಾಮ ಧರಿಗೌಡ, ವೆಂಕಟೇಶ ದೇಶಪಾಂಡೆ, ರಾಜು ಢಾಲೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 