ಕಾರ್ಮಿಕರಿಗೆ ಕಿಟ್ ವಿತರಿಸಿದ ಶಾಸಕ ಲಮಾಣಿ
MLA Lamani distributes kits to workers
ಲಕ್ಷ್ಮೇಶ್ವರ 06: ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ನಿರ್ಮಾಣ ಕಾರ್ಮಿಕರಿಗೂ ಸಹ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಂಡು ಎಲ್ಲ ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಎಲ್ಲ ಕಾರ್ಮಿಕರು ತಮ್ಮ ಬದುಕನ್ನು ಉಜ್ವಲ ಗೊಳಿಸಿಕೊಳ್ಳಬೇಕು ಎಂದುಶಾಸಕ ಡಾ ಚಂದ್ರು ಲಮಾಣಿ ಹೇಳಿದರು. ಅವರು ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಭವನದಲ್ಲಿ ಬುಧುವಾರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸಲಕರಣೆಗಳ ಪ್ರತಿರಕ್ಷಣಾ ಕಿಟ್ಟು ವಿತರಿಸಿ ಅವರು ಕಾರ್ಮಿಕರಿಗೆ ಸಲಹೆ ನೀಡಿದರು.
ಇದೇ ಸಮಯದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರ ಸಂಘದಿಂದ ಶಾಸಕರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಮಾತನಾಡಿ ಸರ್ಕಾರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸಲಕರಣೆಗಳ ಕಿಟ್ಟುಗಳನ್ನು ವಿತರಿಸುವುದ ರೊಂದಿಗೆ ಇನ್ನು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಎಲ್ಲ ಕಟ್ಟಡ ಕಾರ್ಮಿಕರು ಪ್ರಯೋಜನ ಪಡೆದು ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರು ಸದಸ್ಯರು ಕಾರ್ಮಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 