ಕಾರ್ಮಿಕರಿಗೆ ಕಿಟ್ ವಿತರಿಸಿದ ಶಾಸಕ ಲಮಾಣಿ
MLA Lamani distributes kits to workers
ಲಕ್ಷ್ಮೇಶ್ವರ 06: ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ನಿರ್ಮಾಣ ಕಾರ್ಮಿಕರಿಗೂ ಸಹ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಂಡು ಎಲ್ಲ ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಎಲ್ಲ ಕಾರ್ಮಿಕರು ತಮ್ಮ ಬದುಕನ್ನು ಉಜ್ವಲ ಗೊಳಿಸಿಕೊಳ್ಳಬೇಕು ಎಂದುಶಾಸಕ ಡಾ ಚಂದ್ರು ಲಮಾಣಿ ಹೇಳಿದರು. ಅವರು ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಭವನದಲ್ಲಿ ಬುಧುವಾರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸಲಕರಣೆಗಳ ಪ್ರತಿರಕ್ಷಣಾ ಕಿಟ್ಟು ವಿತರಿಸಿ ಅವರು ಕಾರ್ಮಿಕರಿಗೆ ಸಲಹೆ ನೀಡಿದರು.
ಇದೇ ಸಮಯದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರ ಸಂಘದಿಂದ ಶಾಸಕರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಮಾತನಾಡಿ ಸರ್ಕಾರ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸಲಕರಣೆಗಳ ಕಿಟ್ಟುಗಳನ್ನು ವಿತರಿಸುವುದ ರೊಂದಿಗೆ ಇನ್ನು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಎಲ್ಲ ಕಟ್ಟಡ ಕಾರ್ಮಿಕರು ಪ್ರಯೋಜನ ಪಡೆದು ಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರು ಸದಸ್ಯರು ಕಾರ್ಮಿಕರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 