ಲಿಂಗೈಕ್ಯೆ ಬಸವಪ್ರಭು ದೇವರು ಮನೆಗೆ ಶಾಸಕ ನಾಡಗೌಡ ಭೇಟಿ
MLA Nadagowda visits the house of Lingayekye Basavaprabhu Dev
ತಾಳಿಕೋಟಿ 16: ಪಟ್ಟಣದ ಕೈಲಾಸ ಪೇಟೆಯ ಬಸವಪ್ರಭು ದೇವರು ಬುಧವಾರ ಲಿಂಗೈಕ್ಯೆರಾದ ಹಿನ್ನೆಲೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಭೇಟಿ ನೀಡಿದರು. ಶುಕ್ರವಾರ ಪಟ್ಟಣದ ಕೈಲಾಸ ಪೇಟೆಯಲ್ಲಿರುವ ಶ್ರೀಗಳ ಮನೆಗೆ ಭೇಟಿ ನೀಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ನಂತರ ಮಾತನಾಡಿದ ಅವರು ಬಸವಪ್ರಭು ಶ್ರೀಗಳು ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರವಾದ ಸೇವೆಯನ್ನು ನೀಡಿದ್ದಾರೆ. ನೇರ ನುಡಿಯ, ಪ್ರಖರ ವಾಗ್ಮಿಗಳಾದ ಅವರು ಒಳ್ಳೆಯ ಪ್ರವಚನಕಾರರೂ ಆಗಿದ್ದು ಸರಳ ವ್ಯಕ್ತಿತ್ವ ರೂಡಿಸಿಕೊಂಡಿದ್ದರು. ಅವರ ಅಗಲಿಕೆ ಆಧ್ಯಾತ್ಮಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮುಖಂಡರಾದ ಸಿದ್ದನಗೌಡ ಪಾಟೀಲ (ನಾವದಗಿ),ಪ್ರಭುಗೌಡ ಮದರಕಲ್ಲ, ಶ್ರೀಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 