ಪಾರ್ಥನಹಳ್ಳಿಯಲ್ಲಿ ಶಾದಿ ಮಹಲಗೆ ಶಾಸಕ ರಾಜು ಕಾಗೆ ಶಂಕುಸ್ಥಾಪನೆ
MLA Raju Kage laid the foundation stone for Shadi Mahal in Parthanahalli
ಅಥಣಿ 05: ಅನಂತಪೂರ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿಯೂ ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಅವರು ಪಾರ್ಥನಹಳ್ಳಿ ಗ್ರಾಮದಲ್ಲಿ ಶಾದಿ ಮಹಲ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಈ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ನೀರಿನ ತೊಂದರೆ ಇದೆ ಹೀಗಾಗಿ ಬೇಸಿಗೆ ಅವಧಿಯಲ್ಲಿ ನೀರಿನ ಕೊರತೆಯಾಗುತ್ತದೆ ಹೀಗಾಗಿ ಈ ಭಾಗದ ಜನ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ಎಂದು ಆಗ್ರಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವುದಾಗಿ ಹೇಳಿದರು. ಜಿಲ್ಲಾ ಪಂಚಾಯತ ಇಲಾಖೆಯಡಿ ಮಂಜೂರಾದ 20 ಲಕ್ಷ ವೆಚ್ಚದ ಶಾದಿ ಮಹಲ ಕಟ್ಟಡದ ಉಪಯೋಗವನ್ನು ಮುಸ್ಲಿಂ ಸಮಾಜ ಬಾಂಧವರು ಮಾಡಿಕೊಳ್ಳಬೇಕು ಎಂದ ಅವರು ಕಾಮಗಾರಿ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಪಾರ್ಥನಹಳ್ಳಿ ಗ್ರಾಮದ ಮುಖಂಡ ರಫಿಕ್ ಪಟೇಲ್ ಗುದ್ದಲಿ ಪೂಜೆ ನೆರವೇರಿಸಿದರು. ಧುರೀಣರಾದ ಸಿದರಾಯ ತೇಲಿ, ಷರೀಫ ಮುಲ್ಲಾ, ಸದಾಶಿವ ಬಿರಾದಾರ, ಇಲಾಹಿ ಮೋಳೆ, ಬಂಡು ನಾಯಿಕ, ಕಾಡಪ್ಪಾ ಸಿಂಗಾಡಿ, ಸಿಕಂದರ ಪಟೇಲ್, ಇಸ್ಮಾಯಿಲ ಪಟೇಲ್, ರಮೇಶ ಕಾಂಬಳೆ, ಅಮೀರ್ ಪಟೇಲ್, ಇಬ್ರಾಹಿಂ ಮೋಳೆ, ಪಿ.ಡಿ.ಒ ಸುರೇಶ ದೊಡ್ಮನಿ ಸೇರಿದಂತೆ ಅನೇಕರು ಉಪಸಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 