14ನೇ ದಲೈ ಲಾಮಾರ ಆಶೀರ್ವಾದ ಪಡೆದ ಶಾಸಕ ಶಿವರಾಮ ಹೆಬ್ಬಾರ್
MLA Shivaram Hebbar receives blessings from the 14th Dalai Lama
ಮುಂಡಗೋಡ 29: ಮುಂಡಗೋಡದ ಟಿಬೇಟಿಯನ್ ಕಾಲೋನಿಗೆ ಭಾನುವಾರ ಭೇಟಿ ನೀಡಿದ ಶಾಸಕ ಶಿವರಾಮ ಹೆಬ್ಬಾರ್ ಅವರು ಟಿಬೆಟಿಯನ್ನರ ಪರಮೋಚ್ಚ ಧರ್ಮಗುರು ಹಾಗೂ ನೊಬೆಲ್ ಶಾಂತಿ ಪುರಸ್ಕೃತ ಪೂಜ್ಯ ದಲೈ ಲಾಮ ಅವರ ದರ್ಶನ ಪಡೆದು ಆಶೀರ್ವಾದ ಪಡೆದರು. ಶಾಸಕರು ದಲೈ ಲಾಮ ಅವರ ದರ್ಶನ ಪಡೆದು ಶಾಂತಿ, ಕರುಣೆ ಮತ್ತು ವಿಶ್ವ ಸಹೋದರತ್ವದ ಸಂದೇಶವನ್ನು ಸ್ಮರಿಸಿದರು. ಅವರು ಪರಮಪೂಜ್ಯರ ಆಧ್ಯಾತ್ಮಿಕ ಚಿಂತನೆಗಳು ಸಮಾಜದಲ್ಲಿ ಸೌಹಾರ್ದತೆ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತರಾದ ಕಮಲಾಕರ ನಾಯ್ಕ್, ನಾಗರಾಜ್ ನಾಯ್ಕ್ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 