ವಿವಿಧ ಅಭಿವೃದ್ಧಿ ಕಾಮಗಾರಿ ಶಾಸಕ ಶ್ರೀನಿವಾಸ ಮಾನೆ ಚಾಲನೆ

ಹಾನಗಲ್: ತಾಲೂಕಿನ ಅಕ್ಕಿಆಲೂರು ಗ್ರಾಪಂ ವ್ಯಾಪ್ತಿಯಲ್ಲಿ  ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.

  ಗ್ರಾಪಂ 15 ನೇ ಹಣಕಾಸು ಯೋಜನೆಯಡಿ ವಿಕಲಚೇತನರಿಗೆ ಕಾಯ್ದಿರಿಸಿದ 2021-22 ಹಾಗೂ 2022-23 ನೇ ಸಾಲಿನ ರೂ. 5.50 ಲಕ್ಷ ಅನುದಾನದಲ್ಲಿ ನಿಮರ್ಾಣಗೊಂಡ ವಾಣಿಜ್ಯ ಮಳಿಗೆಗಳು ಹಾಗೂ ಸರ್ಕಾರಿ ಉರ್ದು  ಹೆಣ್ಣುಮಕ್ಕಳ ಶಾಲೆಯಲ್ಲಿ ನಿರ್ಮಾಣಗೊಂಡ ಬಿಸಿಯೂಟದ ಕೊಠಡಿಯನ್ನು ಶಾಸಕ ಮಾನೆ ಉದ್ಘಾಟಿಸಿದರು.

  ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗ್ರಾಪಂ ಸದಸ್ಯರು ಕಾಳಜಿ ವಹಿಸಿದರೆ ಅಭಿವೃದ್ಧಿಯ ಚಿತ್ರಣ ಬದಲಾಗಲಿದೆ. ರಸ್ತೆ, ಸಿಡಿ, ಗಟಾರ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಹೇಳಿದ ಅವರು ಈ ನಿಟ್ಟಿನಲ್ಲಿ ಕಾಳಜಿ ವಹಿಸುವಂತೆ ಕರೆ ನೀಡಿದರು.

  ಗ್ರಾಪಂ ಅಧ್ಯಕ್ಷ ಮಕ್ಬೂಲ್ಅಹ್ಮದ್ ರುಸ್ತುಂಖಾನವರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶೇಕವ್ವ ತಳವಾರ, ಜಿಪಂ ಮಾಜಿ ಸದಸ್ಯ ಟಾಕನಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಶೇಷಗಿರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವು ತಳವಾರ, ಮುಖಂಡರಾದ ಸದಾಶಿವ ಬೆಲ್ಲದ, ಗೀತಾ ಪೂಜಾರ, ಸತ್ತಾರಸಾಬ ಅರಳೇಶ್ವರ, ಯಾಸೀರಅರಾಫತ್ ಮಕಾನದಾರ ಸೇರಿದಂತೆ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.