ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವೈದ್ಯ ಭೂಮಿ ಪೂಜೆ
MLA Vaidya Bhoomi Pooja for CC road construction work
ಯರಗಟ್ಟಿ, 23 : ಈ ಭಾಗದ ಜನರ ಸುಗಮವಾಗಿ ಸಂಚರಿಸಲು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ತಾವಲಗೇರಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ. ಮೊತ್ತದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಯರಗಟ್ಟಿ ಭಾಗದ ಜನರಿಗೆ ಸಂಪೂರ್ಣ ತಾಲೂಕಾ ಮಟ್ಟದ ಕಚೇರಿಗಳ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕಾಂಗ್ರೇಸ್ ಪ್ರಕಾಶ ವಾಲಿ ಮಾತನಾಡಿ, ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದ್ದು ಗುಣಮಟ್ಟದ ಜತೆಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣ ಗೊಳಿಸಿ ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಶಾಸಕ ವಿಶ್ವಾಸ ವೈದ್ಯ ಅವರನ್ನು ಗ್ರಾಮಸ್ಥರು, ಕಾರ್ಯಕರ್ತರು ಸನ್ಮಾನಿಸಿದರು.
ಗ್ರಾ. ಪಂ. ಅಧ್ಯಕ್ಷ ಲಕ್ಕಪ್ಪ ಸನ್ನಿಂಗನ್ನವರ, ಮುಖಂಡ ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಬಂಗಾರೆಪ್ಪ ಹರಳಿ, ದ್ಯಾಮಣ್ಣಾ ಬಂಡಿವಡ್ಡರ, ಸಿದ್ದಪ್ಪ ಬುರ್ಲಿ, ಚಿಂತಾಮಣಿ ಬಡ್ಡಿವಡ್ಡರ, ಭರಮಣ್ಣಾ ಹಕ್ಕಿ, ಭರಮಪ್ಪ ಕುರಿ, ಈಶ್ವರ ತಳನಟ್ಟಿ, ಪ್ರಕಾಶ ಬಂಡಿವಡ್ಡರ ಸೇರಿದಂತೆ ಕಾರ್ಯಕರ್ತರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 