ವ್ಯಾಪಿಸುತ್ತಿರುವ ಕೊರೊನಾ ಸೋಂಕು : ಪ್ರಧಾನಿ ಮೋದಿ ಬ್ರುಸೆಲ್ಸ್ ಪ್ರವಾಸ ರದ್ದು
ನವದೆಹಲಿ, ಮಾ 7, ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ್ದು ಈ ಸೋಂಕಿಗೆ ಹಲವರು ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಬ್ರುಸೆಲ್ಸ್ ಪ್ರವಾಸ ರದ್ದು ಮಾಡಿದ್ದಾರೆ. ಅಲ್ಲದೇ ಭಾರತ- ಐರೋಪ್ಯ ಒಕ್ಕೂಟ ಶೃಂಗ ಸಭೆಯನ್ನೂ ಮುಂದೂಡಲಾಗುವುದು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಗುರುಗ್ರಾಮದಲ್ಲಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಅವರೊಂದಿಗೆ ಸಂಪರ್ಕದಲ್ಲಿದ್ದ ಐವರನ್ನು ದೆಹಲಿಯಲ್ಲಿ ತೀವ್ರ ನಿಗಾದಲ್ಲಿ ಇಡಲಾಗಿದೆ. ಸೋಂಕಿತ ವ್ಯಕ್ತಿ ಒಟ್ಟು 91 ಮಂದಿಯೊಂದಿಗೆ ಸಂಪರ್ಕದಲ್ಲಿದ್ದ ಎಂಬ ಮಾಹಿತಿಯೂ ಹೊರಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಟಲಿ ಮತ್ತು ದಕ್ಷಿಣ ಕೊರಿಯಾದಿಂದ ಬರುವ ಎಲ್ಲ ಪ್ರಯಾಣಿಕರಿಗೂ ಕೇಂದ್ರ ಸರಕಾರ ಹೆಚ್ಚುವರಿ ವೀಸಾ ನಿರ್ಬಂಧ ವಿಧಿಸಿದೆ. ಆಯಾ ದೇಶಗಳ ಆರೋಗ್ಯ ಪ್ರಾಧಿಕಾರದಡಿ ಬರುವ ಪ್ರಯೋಗಾಲಯಗಳಿಂದ ತಮಗೆ ಕೋವಿಡ್-19 ಸೋಂಕು ಇಲ್ಲ ಎಂದು ದೃಢಪಡಿಸಿದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತೋರಿಸಿ ಭಾರತ ಪ್ರವೇಶಕ್ಕೆ ಅನುಮತಿ ಪಡೆಯಬಹುದಾಗಿ ಎಂದು ಮೂಲಗಳು ತಿಳಿಸಿವೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 