ಮಹಾಲಿಂಗಪುರ: ವಿಜೃಂಭಣೆಯಿಂದ ವಾಸವಿ ಜಯಂತಿ ಆಚರಣೆ
ಲೋಕದರ್ಶನ ವರದಿ
ಮಹಾಲಿಂಗಪುರ 16: ವ್ಯಾಪಾರೋದ್ಯಮವನ್ನೇ ಪ್ರಧಾನ ವೃತ್ತಿಯಾಗಿ ಹೊಂದಿರುವ ಆರ್ಯವೈಶ್ಯ ಸಮಾಜದವರ ಕುಲದೇವತೆ ವಾಸವಿ ಕನ್ಯಕಾ ಪರಮೇಶ್ವರಿ ಜಯಂತಿಯನ್ನು ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ವಾಸವಿ ಮೂರ್ತಿಯನ್ನು ಮೆರವಣಿಗೆ ಮೂಲಕ ವಾಸವಿ ಕಲ್ಯಾಣ ಮಂಟಪಕ್ಕೆ ತರಲಾಯಿತು. ನಂತರ ವಾಸವಿ ಕಲ್ಯಾಣಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಪ್ರಮುಖರಾದ ವಿ.ಎನ್.ಗುಂಡಾ ಕನ್ಯಕಾಪರಮೇಶ್ವರಿ ವಾಸವಿ ಲೋಕಮಾತೆಯಾಗಿ ಬೆಳಗಿದ ಅನುಪಮ ತ್ಯಾಗಜೀವಿ.ಸತ್ಯ ಅಹಿಂಸೆಗಳ ಸಾಕಾರಮೂರ್ತಿ. ಧರ್ಮವನ್ನು ಮತ್ತು ಮಹಿಳೆಯರನ್ನು ರಕ್ಷಿಸಲು, ಜನತೆಯ ಜೀವ ಉಳಿಸಲು ಯುದ್ಧ ಮತ್ತು ರಕ್ತಪಾತವನ್ನು ತಡೆಗಟ್ಟಿ ಮನುಕುಲಕ್ಕೆ ಶಾಂತಿ ಸಂದೇಶವನ್ನು ನೀಡುವ ಸಲುವಾಗಿ ಅಗ್ನಿ ಪ್ರವೇಶ ಮಾಡಿ ದೇವತಾ ಸ್ಥಾನಮಾನದಲ್ಲಿ ನಿಂತ ಅವತಾರಿಣಿ. ಈ ಮಾತೆಯ ಪೂಜಿಸುವದರಿಂದ ಹಾಗೂ ಸ್ಮರಣೆ ಮಾಡುವದರಿಂದ ಸರ್ವ ಸಂಕಟಗಳು ನಿವಾರಣೆಯಾಗಿ ಮನೆ ಹಾಗೂ ಮನದಲ್ಲಿ ಸಂತೋಷ ನೆಲೆಸುವದೆಂದರು.
ಮಹಾಲಿಂಗಪುರ ಆರ್ಯ ವೈಶ್ಯ ಸಮಾಜದ ಅಧ್ಯಕ್ಷ ಮುರಳಿ ಗುಂಡಾ, ಡಾ.ಕೆ.ವಿ.ದಂತಿ, ಆನಂದ ಗುಂಡಾ, ಕಿರಣ ಗುಂಡಾ, ಕೃಷ್ಣಾಜಿ ಗುಂಡಾ, ಶ್ರೀಪಾದ ಗುಂಡಾ, ಡಾ.ವಿಶ್ವನಾಥ ಗುಂಡಾ, ಮಂಜುನಾಥ ಗುಂಡಾ, ಶ್ರೀನಿವಾಸ ಗುಂಡಾ, ಸುಧೀರ ಗುಂಡಾ, ರಾಘವೇಂದ್ರ ಗುಂಡಾ, ನಾಗರಾಜ ಬೆಂಗಳೂರ, ಸುಮಂಗಲಾ ಗುಂಡಾ, ಸುವಣರ್ಾ ಗುಂಡಾ, ರೋಹಿಣಿ ಗುಂಡಾ, ಅಶ್ವಿನಿ ಗುಂಡಾ, ಸುರೇಖಾ ಗುಂಡಾ ಮುಂತಾದವರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 