ಮಹಾರಾಷ್ಟ್ರ : ಆತ್ಮಹತ್ಯೆಗೆ ಯತ್ನಿಸಿದ ಸತ್ಯಶೋಧಕ ಸೇನಾ ನಾಯಕಿ
ಔರಂಗಾಬಾದ್, ಜೂನ್ 13,ರಾಜ್ಯ ಕೈಗಾರಿಕಾ ಸಚಿವ ಸುಭಾಸ್ ದೇಸಾಯಿ ಅವರ ಕಾರಿನ ಮುಂದೆ ಸತ್ಯಶೋದಕ ಸೇನಾ ಮಹಿಳಾ ಜಿಲ್ಲಾ ಮುಖ್ಯಸ್ಥೆ ಆಮ್ರಪಾಲಿ ಹಿವಾಲೆ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶೆಂದ್ರಾ ಡಿಎಂಐಸಿ ಪ್ರದೇಶದಲ್ಲಿ ಎರಡು ಖಾಸಗಿ ಥರ್ಮಾಕೋಲ್ ಘಟಕ ಸ್ಥಾಪನೆ ವಿರೋಧಿಸಿ ಹಿವಾಲೆ ಸಚಿವರೆದುರು ಪ್ರತಿಭಟಿಸುವ ಸಂದರ್ಭದಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಸಚಿವ ಸುಭಾಸ್ ದೇಸಾಯಿ ಶುಕ್ರವಾರ ಕೋವಿಡ್ 19 ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಈ ಅಚಾತುರ್ಯ ಜರುಗಿದೆ. ಡಿಎಂಐಸಿಯಲ್ಲಿ ಸ್ಥಾಪನೆಯಾಗಿರುವ ಥರ್ಮಾಕೋಲ್ ಕಂಪನಿಗಳಿಂದಾಗಿ ಈ ಪ್ರದೇಶದ ನಿವಾಸಿಗಳ ಆರೋಗ್ಯಕ್ಕೆ ಅಪಾಯವಿದೆ ಎಂದು ಆರೋಪಿಸಿದ ಹಿವಾಲೆ, ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಲ್ಲಿಸಿದ್ದ ಸಚಿವರ ಕಾರಿನ ಮುಂದೆ ಮಲಗಿ ಪ್ರತಿಭಟಿಸಿದರು. ಈ ಹಠಾತ್ ಘಟನೆಯು ಗದ್ದಲಕ್ಕೆ ಕಾರಣವಾಯಿತು. ಕೊನೆಗೆ ಪೊಲೀಸರು ಮಹಿಳೆಯನ್ನು ವಶಕ್ಕೆ ತೆಗೆದುಕೊಂಡು, ಅನಾಹುತವನ್ನು ತಪ್ಪಿಸಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 