ಮಹಾರಾಷ್ಟ್ರ : ಬಿಜೆಪಿ ಸರ್ಕಾರ ಬಹುತೇಕ ಖಚಿತ
ಮುಂಬೈ, ನ 7: ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ನೀಡುವುದಿಲ್ಲ ಎಂದು ಎನ್ ಸಿ ಪಿ ಮತ್ತು ಕಾಂಗ್ರೆಸ್ ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಗುರುವಾರ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ವಿಧಿಬದ್ಧವಾಗಿ ಹಕ್ಕು ಮಂಡಿಸುವುದರೊಂದಿಗೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೋಚಕ ಮತ್ತು ನಾಟಕೀಯ ವಿದ್ಯಮಾನಗಳು ಕೊನೆಗೊಳ್ಳುವ ಹಂತಕ್ಕೆ ಬಂದಿವೆ. ಈಗ ಬಿಜೆಪಿಗೆ ಶಿವಸೇನೆ ಅನಿವಾರ್ಯವಾಗಿದ್ದು, ಅದೇ ರೀತಿ ಶಿವಸೇನೆಗೂ ಬಿಜೆಪಿ ಅಗತ್ಯವಿದೆ. ಬೇರೆ ಅವಕಾಶಗಳು ಇಲ್ಲದೇ ಇರುವ ರಾಜಕೀಯ ಸ್ಥಿತಿ ಎದುರಾಗಿದೆ. ಹೀಗಾಗಿ ಇನ್ನು ಒಂದೆರಡು ದಿನಗಳಲ್ಲಿ ರಾಜ್ಯದಲ್ಲಿ ಭಾ ಜ ಪ ನೇತೃತ್ವದ ಸರ್ಕಾರ ರಚನೆಯಾಗುವುದು ಖಚಿತ ಎಂಬ ವಿಶ್ವಾಸ ಬಿಜೆಪಿ ನಾಯಕರಲ್ಲಿ ಮನೆ ಮಾಡಿದೆ. ಹಾಲಿ ವಿಧಾನಸಭೆಯ ಅವಧಿ ಇದೇ ಶನಿವಾರ ನ 9 ಕ್ಕೆ ಮುಕ್ತಾಯವಾಗಲಿದ್ದು ಹೊಸ ರಾಜಕೀಯ ಬೆಳವಣಿಗೆಗಳ ಪ್ರಕಾರ ಆ ವೇಳೆಯೊಳೆಗೆ ಹೊಸ ಸರ್ಕಾರ ರಚನೆಯಾಗುವ ಆಶಾದಾಯಕ ಪರಿಸ್ಥಿತಿ ಕಂಡು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿಲ್ಲ. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಮಿತ್ರಪಕ್ಷ ಶಿವಸೇನೆಯೊಂದಿಗೆ ಕೂಡಿ ಸರ್ಕಾರ ರಚನೆ ಮಾಡುವಷ್ಟು ಸರಳ ಬಹುಮತವನ್ನು ಗಳಿಸಿಕೊಂಡಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 