ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕನ್ನಡಿಗರು, ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಪ್ರಚಾರ
ಬೆಂಗಳೂರು, ಅ.15: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಪಕ್ಷದ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ ಮತದಾರರನ್ನು ಸೆಳೆಯಲಿದ್ದಾರೆ. ಮಹಾರಾಷ್ಟ್ರಕ್ಕೆ ನಾಳೆ ಯಡಿಯೂರಪ್ಪ ಹೊರಡಲಿದ್ದಾರೆ. ಬುಧವಾರ ಅವರು ಸಾಂಗ್ಲಿ, ಸೋಲಾಪುರ, ಅಕ್ಕೋಲಕೊಟ್, ಚಾಕೂರು, ಲಾತೂರು ಎಂಬಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ತಿಳಿಸಿದೆ. ಗುರುವಾರ ಕಲಬುರಗಿಯ ಗಂಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ರಾಜ್ಯ ರಾಜಧಾನಿಗೆ ಹಿಂದಿರುಗಲಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮತ್ತು ಲಿಂಗಯತರನ್ನು ಸೆಳೆಯಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಚಾರಕ್ಕೆ ಮತ್ತೋರ್ವ ಲಿಂಗಾಯತ ನಾಯಕರಾದ ಉಪ ಮುಖ್ಯಮಂತ್ರಿಗಳಾದ ಲಕ್ಷ್ಣಣ್ ಸವದಿ ಅವರನ್ನೂ ಕಳುಹಿಸಲಿದೆ. ಅದೇ ರೀತಿ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನೂ ಪ್ರಚಾರಕ್ಕೆ ಇಳಿಸಲಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 