ತಡವಲಗಾದಲ್ಲಿ ಮಹಾಶಿವರಾತ್ರಿ ಅದ್ದೂರಿಯಾಗಿ ಆಚರಣೆ
Mahashivratri celebrated in Tadavalaga with grandeur
ಇಂಡಿ 15: ಮಹಾಶಿವರಾತ್ರಿ ಹಬ್ಬದ ನಿಮಿತ್ತವಾಗಿ ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಜೋಡಗುಡಿಯ ಮರುಳಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಶಿವನ ಮೂರ್ತಿಗೆ ಪಂಚಾಮೃತ ಅಭಿಷೇಕ ಪೂಜೆ ಸಲ್ಲಿಸಲಾಯಿತು.
ಮಹಾಶಿವರಾತ್ರಿ ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬವಾಗಿದ್ದು, ಶಿವ ಮತ್ತು ಶಕ್ತಿ (ಪಾರ್ವತಿ) ಸಮ್ಮಿಲನದ ಸಂಕೇತವಾಗಿದೆ. ಅಜ್ಞಾನದ ಕತ್ತಲೆಯನ್ನು ಕಳೆದು ಜ್ಞಾನದ ಬೆಳಕನ್ನು ಪಡೆಯಲು, ಶಿವನು ಲಿಂಗರೂಪಿಯಾಗಿ ಅವತರಿಸಿದ ದಿನದ ನೆನಪಿನಲ್ಲಿ ಭಕ್ತರು ದಿನವೀಡೀ ಉಪವಾಸ, ಜಾಗರಣೆ ಹಾಗೂ ಬಿಲ್ವಪತ್ರೆ ಪೂಜೆ ಮೂಲಕ ಶ್ರದ್ಧಾಭಕ್ತಿಯಿಂದ ಶಿವನನ್ನು ಆರಾಧಿಸುತ್ತಾರೆ.ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು.
ಈ ಹಬ್ಬದಂದು ದಿನವೀಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ ಎಂದು ಹೇಳುತ್ತಾರೆ ಗ್ರಾಮದ ಹಿರಿಯರು.ಹಾಗೂ ಶಿವರಾತ್ರಿಯ ದಿನ ಇಂದು ದೇವರ ಪೂಜಾರಿ ರೇವಪ್ಪ ಮಲ್ಕಪ್ಪ ಪೂಜಾರಿ (ಕಡ್ಡಿ) ಅವರು ಗ್ಬೆರಾಮದ ಒಳೆತ್ಳತಿಗಾಗಿ ಮರುಳಸಿದ್ದೇಶ್ವರ ಗ್ರಾಮಕ್ಕೆ ಸಕಲ ಸಂಪತ್ತು ಮತ್ತು ಮಳೆ ಬೆಳೆ ಚೆನ್ನಾಗಿ ಆಗಲಿ ಎಂದು ಒಂದು ದಿನದ ಮಟ್ಟಿಗೆ ಮೌನ ಅನುಷ್ಠಾನ ಮಾಡುತ್ತಿದ್ದುದು ಕೂಡಾ ಕಂಡು ಬಂತು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 