ಮಹಾತ್ಮಾ ಗಾಂಧೀಜಿ ಜಯಂತಿ ನಿಮಿತ್ಯ ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ
ಕಾಗವಾಡ 04: ಶಿರಗುಪ್ಪಿಯ "ಅಮೋಲ ಜನಕಲ್ಯಾಣ ಫೌಂಡೇಶನ" ಮತ್ತು ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ 150ನೇ ಮಹಾತ್ಮಾ ಗಾಂಧಿಜಿಯವರ ಜಯಂತಿ ಮತ್ತು ಲಾಲಬಹಾದ್ದೂರ ಶಾಸ್ತ್ರಿಜಿಯವರ 115ನೇ ಜಯಂತಿ ಆಚರಿಸಿದರು.
ಬುಧವಾರ ರಂದು "ಅಮೋಲ ಜನಕಲ್ಯಾಣ ಫೌಂಡೇಶನ"ದ ವೈದ್ಯರಾದ ಡಾ. ಅಮೋಲ ಸರಡೆ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಪುಷ್ಪಲತಾ ಹಾಗೂ ಅವರ ಸಿಬ್ಬಂದಿಯವರು ಸಮುದಾಯ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿ, ಮಹಾತ್ಮಾ ಗಾಂಧಿಜಿಯವರು ಸ್ವಚ್ಛತೆಗೆ ನೀಡಿರುವ ಸಂದೇಶದಂತೆ ಸೇವೆ ನೀಡಿದರು.
ದೇಶದ ಪ್ರಧಾನಿ ನರೇಂದ್ರ ಮೋದಿಜಿ ಇಂದಿನಿಂದ ಪ್ಲಾಸ್ಟಿಕ್ ಮುಕ್ತ ಭಾರತ ಮಾಡುವ ಪಣ ತೊಟ್ಟಿದ್ದರಿಂದ ಎಲ್ಲರು ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ ತೆಗೆದುಕೊಂಡರು.
ಸರಕಾರಿ ಆಸ್ಪತ್ರೆಯಲ್ಲಿ ಉಪಚಾರಿಸಿಕೊಳ್ಳುತ್ತಿರುವ ರೋಗಿಗಳಿಗೆ ಹಣ್ಣು ವಿತರಿಸಿ, ಜಯಂತಿಯನ್ನು ಆಚರಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಆಶಾ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 