15 ರಂದು ಮೈಲಾರಲಿಂಗೇಶ್ವರ ಜಾತ್ರಾ ಕಾರ್ಣಿಕೋತ್ಸವ
Mailaralingeshwara Fair Karnikotsava on the 15th
ಧಾರವಾಡ 11: ಸುಮಾರು 8ನೇ ಶತಮಾನದ ಪೂಜ್ಯ ಜಕಣಾಚಾರಿಗಳು ಧಾರವಾಡದ ವಿದ್ಯಾಗಿರಿಯಲ್ಲಿ ನಿರ್ಮಿಸಿದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೈಲಾರಲಿಂಗ ದೇವಸ್ಥಾನದ ಜಾತ್ರೆ ಹಾಗೂ ಕಾರ್ಣಿಕೋತ್ಸವವು ರವಿವಾರ ದಿನಾಂಕ: 15-02-2026 ರಂದು ಜರಗುವುದು ಮತ್ತು ಶನಿವಾರ ದಿನಾಂಕ: 14-02-2026 ರಂದು ಮಹಾಭಿಷೇಕ ಬಿಲ್ಲು ಪೂಜೆ, ಹಾಗೂ ರಾತ್ರಿ, ಭಜನೆ ಜಾಗರಣೆ ನಡೆಯುವದು. ಇದು 60ನೇ ಕಾರ್ಣಿಕೋತ್ಸವ ಆಗಿದ್ದು, ಮೈಲಾರಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಸಿರಿಮಲ್ಲ ತಿಪ್ಪಣ್ಣ ಶಿರೋಳ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರಗುವುದು. 15-02-2026 ರಂದು ರವಿವಾರ ಮಧ್ಯಾಹ್ನ 12 ಗಂಟೆಗೆ ಡೋಣಿ ಪೂಜೆ (ತುಂಬಿಸುವುದು), ಅನ್ನ ಸಂತರೆ್ಣ, ಸಂಜೆ 4:30 ಕ್ಕೆ ಮಹಾಮಂಗಳಾರತಿ ನಂತರ ಪಲ್ಲಕ್ಕಿ ಉತ್ಸವ ಕಾರ್ಣಿಕ ಸೇವೆ, ಸರಪಳಿ ಸೇವೆ ಜರಗುವವು, ಕಾರಣ ಸಕಲ ಸದ್ಭಕ್ತರು ತನುಮನದಿಂದ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕಾರ್ಣಿಕ ಪುರುಷ ಸಿರಿಮಲ್ಲ ತಿಪ್ಪಣ್ಣ ಶಿರೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 