ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ಸದುಪಯೋಗ ಮಾಡಿಕೊಳ್ಳಿ : ಆರ್ ಬಿ ದಮ್ಮೂರಮಠ
Make good use of government pre-primary school: RB Dammooramath
ತಾಳಿಕೋಟಿ 09: 2026-27 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಯು ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್) ಆಗಿದ್ದು ಇದರ ಅಡಿಯಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ ಯುಕೆಜಿ) ಆಂಗ್ಲ ಮಾಧ್ಯಮದಲ್ಲಿ ಆರಂಭಿಸಲಾಗಿದೆ ಇದರ ಸದುಪಯೋಗವನ್ನು ಮಾಡಿಕೊಳ್ಳಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ ಹೇಳಿದರು. ಸೋಮವಾರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಪಬ್ಲಿಕ್ ಶಾಲೆಯ ನೂತನ ವಿಭಾಗದ ಪರಿಚಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖಾಸಗಿ ಶಾಲೆಯಲ್ಲಿ ಹೆಚ್ಚಿನ ದುಡ್ಡು ಕೊಟ್ಟು ಮಕ್ಕಳಿಗೆ ಶಿಕ್ಷಣ ಕೊಡಿಸಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ ಅಂತವರಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ನೀಡುವ ಈ ಸರ್ಕಾರಿ ಶಾಲೆಗಳು ಹೆಚ್ಚು ಅನುಕೂಲವಾಗುತ್ತವೆ ಎಂದರು.
ಮುಖ್ಯ ಶಿಕ್ಷಕಿ ಡಾ.ಅನೀತಾ ಸಜ್ಜನ ಮಾತನಾಡಿ ನೂತನವಾಗಿ ಆರಂಭಿಸಲಾಗಿರುವ ಆಂಗ್ಲ ಮಾಧ್ಯಮದ ಈ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಭೋದಕರು, ಗುಣಮಟ್ಟದ ಶಿಕ್ಷಣದ ಜೊತೆಗೆ ಲ್ಯಾಬಿನ ಸವಲತ್ತೂ ಇರುವುದು ಪಾಲಕರು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದರು. ಇದೇ ಸಂದರ್ಭದಲ್ಲಿ ನೂತನವಾಗಿ ಎಲ್ಕೆಜಿ ವರ್ಗಕ್ಕೆ ದಾಖಲಾದ ಮಕ್ಕಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಎಸ್ ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಬಿ.ಸಿ.ಮಸರಕಲ್ಲ,ಬಿಆರ್ಸಿ ಕಾಶಿನಾಥ ಸಜ್ಜನ, ಸಿ ಆರ್ಸಿ ರಾಜು ವಿಜಯಪುರ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 