ವಿಶ್ವೇಶತೀರ್ಥರ ಬೃಂದಾವನ ದರ್ಶನ ಪಡೆದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ಜ. 9 ನಗರದ ವಿದ್ಯಾ ಪೀಠದಲ್ಲಿರುವ ಪೇಜಾವರ ಶ್ರೀಗಳ ಬೃಂದಾವನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ ದರ್ಶನ ಪಡೆದು ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಬೃಂದಾವನ ದರ್ಶನದ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ವಿಚಾರಗಳು ನಮ್ಮ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಇದ್ದಿತ್ತಾದರೂ ಅದು ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರವಾಗಿತ್ತು. ಶ್ರೀಗಳದ್ದು ಉದಾರ ಮನಸಾಗಿತ್ತು ಎಂದರು.
ಹಲವು ಬಾರಿ ಉಡುಪಿ ಮಠಕ್ಕೆ ಭೇಟಿ ನೀಡಿದ್ದೇನೆ. ಭೇಟಿ ಸಂದರ್ಭಗಳಲ್ಲಿ ಪರಸ್ಪರ ವಿಚಾಯಗಳನ್ನು ಮಾಡಿಕೊಳ್ಳುತ್ತಿದ್ದೆವು. ಶ್ರೀಗಳು ನಮ್ಮ ಅಭಿಪ್ರಾಯಗಳನ್ನು ಗೌರವಿಸುತ್ತಿದ್ದರು. ಧಾರ್ಮಿಕ ಚಿಂತನೆಗಳ ಜೊತೆಗೆ ದೇಶದ ಬಗ್ಗೆ ಹಲವು ಸಲಹೆಗಳನ್ನೂ ಸಹ ನೀಡುತ್ತಿದ್ದರು ಎಂದು ಖರ್ಗೆ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 