ತಮ್ಮ ಭೇಟಿಯ ವೇಳೆ ಮಮತಾ ಅವರ ಕಳವಳ ಬಗೆಹರಿಯಲಿದೆ: ರಾಜ್ಯಪಾಲ ಜಗದೀಪ್ ಧನಕರ
ಕೋಲ್ಕತಾ, ಡಿ. 17: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗಿನ ಭೇಟಿಯಲ್ಲಿ ಅವರ ಎಲ್ಲ ಕಳವಳಗಳು ಬಗೆಹರಿಯಲಿವೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಇಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಪಾಲರು, ತಮ್ಮ ಭೇಟಿಯ ವೇಳೆ ಮುಖ್ಯಮಂತ್ರಿ ಪ್ರಬುದ್ಧ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ. ಅವರ ಎಲ್ಲಾ ಕಳವಳ ಇತ್ಯರ್ಥವಾಗಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.ಭಯವನ್ನು ನಿವಾರಿಸಲು ಪ್ರಯತ್ನ ನಡೆಸಿದ ರಾಜ್ಯಪಾಲರು, "ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಭಾರತದ ಯಾವುದೇ ನಾಗರಿಕರಿಗೆ ತೊಂದರೆಯಿಲ್ಲ. ಈ ಬಗ್ಗೆ ಯಾರಿಗೂ ಆತಂಕ ಬೇಡ. ಭಾರತದ ಹೊರಗಡೆ ಹಲವಾರು ವರ್ಷಗಳ ಕಾಲ ಕಿರುಕುಳ ಎದುರಿಸುತ್ತಿರುವವರಿಗೆ ಇದು ಪರಿಹಾರ ಒದಗಿಸಲಿದೆ ಎಂದು ರಾಜ್ಯಪಾಲರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಶಾಂತಿ ಮತ್ತು ಏಕತೆ, ಭ್ರಾತೃತ್ವವನ್ನು ಕಾಪಾಡುವಂತೆ ಅವರು ಮನವಿ ಮಾಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 