ಪಶ್ಚಿಮಬಂಗಾಳ ಸರ್ಕಾರದಿಂದ 105 ಹೆಚ್ಚುವರಿ ವಿಶೇಷ ರೈಲುಗಳ ವ್ಯವಸ್ಥೆ-ಮಮತಾ ಬ್ಯಾನರ್ಜಿ
ಕೊಲ್ಕತಾ, ಮೇ 14,ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ಜನರ ಸಹಾಯಕ್ಕೆ ರಾಜ್ಯ ಸರ್ಕಾರ 105 ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ‘ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಬಿದ್ದಿರುವ ರಾಜ್ಯದ ಜನರಿಗೆ ನೆರವು ನೀಡುವ ಭರವಸೆಯಂತೆ, ತವರು ರಾಜ್ಯಕ್ಕೆ ವಾಪಸ್ಸಾಗಲು ಬಯಸುವವರಿಗಾಗಿ 105 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.’ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಅವರು, ‘ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರು ಈಗಾಗಲೇ ಪಶ್ಚಿಮಬಂಗಾಳಕ್ಕೆ ವಾಪಸ್ಸಾಗಿದ್ದಾರೆ. ಇತರರನ್ನು ವಾಪಸ್ ಕರೆ ತರಲು ಇನ್ನೂ 100 ರೈಲುಗಳ ವ್ಯವಸ್ಥೆ ಮಾಡಲಾಗುವುದು. ಯಾರೊಬ್ಬರೂ ಚಿಂತಿಸಬೇಕಾಗಿಲ್ಲ. ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಬಿದ್ದಿರುವ ರಾಜ್ಯದ ವಲಸೆ ಕಾರ್ಮಿಕರನ್ನು ವಾಪಸ್ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಪ್ರತಿಯೊಬ್ಬರನ್ನೂ ರಾಜ್ಯಕ್ಕೆ ಕರೆತರಲಾಗುವುದು.’ ಎಂದು ಹೇಳಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 