ಏಕ ಕಾಲಕ್ಕೆ ಪುರುಷ, ಮಹಿಳೆ ಕಾಣೆ : ದೂರು ದಾಖಲು
Man, woman missing at same time: Complaint filed
ಕಾರವಾರ, 31 ; ಮುಂಡಗೋಡದ ದೀಪಕ (35 ವರ್ಷ) ಎಂಬ ಯುವಕ 10 ಮೇ 2025 ರಂದು ಬೆಳಗ್ಗೆ 7 ಗಂಟೆಗೆ ಸುಮಾರಿಗೆ ಕಾರವಾರದಲ್ಲಿ ಕೆಲಸ ಇದೆ ಹೋಗುತ್ತೇನೆ ಅಂತಾ ಹೇಳಿ ಹೋದನು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದೆ. ಹಾಗೂ ಮುಂಡಗೋಡದ ಹಳೂರು ಮಾರಿಕಾಂಬಾ ದೇವಸ್ಥಾನದ ಹತ್ತಿರ ನಿವಾಸಿಯಾದ ಆರತಿ (33 ವರ್ಷ) ಎಂಬಾಕೆ ದೀಪಕ ನೊಂದಿಗೆ ಹೋಗಿ, ಕಾಣೆಯಾಗಿರುವ ಬಗ್ಗೆ ದೂರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ. ದುಂಡನೆ ಮುಖ, ಸದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, 5.4 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ. ನೇರಳೆ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ .ಕಾಣೆಯಾದ ಮಹಿಳೆಯ ಚಹರೆ ಇಂತಿದೆ . ದುಂಡನೆ ಮುಖ, ಸದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, 5.4 ಅಡಿ ಎತ್ತರ ಕನ್ನಡ ಭಾಷೆ ಮಾತನಾಡುತ್ತಾಳೆ ಕಪ್ಪು-ನೀಲಿ ಬಣ್ಣದ ಚೂಡಿದಾರ, ಕ್ರೀಮ ಬಣ್ಣ ಪ್ಯಾಂಟ್ ಧರಿಸಿರುತ್ತಾಳೆ.ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಕಾರವಾರ ದೂ.ಸಂ:08382-226550, ಮುಂಡಗೋಡ ಪೊಲೀಸ್ ಠಾಣೆ ದೂ.ಸಂಖ್ಯೆ: 08301-222211, ಪಿ.ಐ ಮುಂಡಗೋಡ ದೂ.ಸಂ 9480805258 ಹಾಗೂ ಪಿ.ಎಸ್.ಐ ಮುಂಡಗೋಡ ದೂ. ಸಂಖ್ಯೆ 9480805275 ನ್ನು ಸಂಪರ್ಕಿಸುವಂತೆ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನೀರೀಕ್ಷಕರು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 