ಟ್ರ್ಯಾಕ್ಟರ್ನಿಂದ ಬಿದ್ದು ವ್ಯಕ್ತಿ ಸಾವು
Man dies after falling from tractor
ಜಮಖಂಡಿ 26: ತಾಲ್ಲೂಕಿನ ಆಲಗೂರ ಗ್ರಾಮದ ಗೌಡ್ರ ಗಡ್ಡೆ ಹತ್ತಿರ ಚಲಿಸುತ್ತಿರುವ ಟ್ರ್ಯಕ್ಟರ್ ನಿಂದ ಕೆಳಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.
ಜಮಖಂಡಿಯಿಂದ ವಿಜಯಪೂರ ಕಡೆಗೆ ಚಲಿಸುತ್ತಿರುವ ಟ್ರ್ಯಕ್ಟರ್ ಚಾಲಕನ ಪಕ್ಕದಲ್ಲಿ ಕುಳಿತಿರುವ ವ್ಯಕ್ತಿ ವಿಜಯಪೂರ ಜಿಲ್ಲೆಯ ಚಡಚಣ ತಾಲ್ಲೂಕಿನ ಚೇನೆಗಾಂವ ಗ್ರಾಮದ ಮಂಜು ಶರಣಪ್ಪ ಕಾಂಬಳೆ ಟ್ರ್ಯಕ್ಟರ್ ನಿಂದ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ದೈವಿ.
ಜಮಖಂಡಿಯಿಂದ ವಿಜಯಪೂರ ಮಾರ್ಗವಾಗಿ ಹೋಗುವ ಟ್ರ್ಯಕ್ಟರ್ ಹಿಂಬಯಿಂದ ಬರುತ್ತಿರುವ ಸಾರಿಗೆ ವಾಹನಕ್ಕೆ ದಾರಿಯನ್ನು ಕೊಡಲು ಹೋಗಿ ಚಿಕ್ಕದಾದ ಬ್ಯಾರೇಜ್ ತಡೆ ಗೋಡೆಯ ಮೇಲೆ ಹಾಯ್ದ ಪರಿಣಾಮ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆೆ.
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ. ಎ.ಎಸ್.ಐ ಕೆ.ಪಿ.ಸವದತ್ತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ. ಶವವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 