ಕೃಷ್ಣಾ ನದಿಗೆ ಬಿದ್ದು ವ್ಯಕ್ತಿ ಸಾವು
Man dies after falling into Krishna river
ಲೋಕದರ್ಶನ ವರದಿ
ಜಮಖಂಡಿ 03: ತಾಲೂಕಿನ ಜಂಬಗಿ ಗ್ರಾಮದ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊರ್ವನು ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಜಮಖಂಡಿ ನಗರದ ಜಯನಗರ ಕಾಲೋನಿಯ ನಿವಾಸಿ ಶೇರಾಅಲ್ಲಿ ಮುಲ್ಲಾ ನದಿಯಲ್ಲಿ ಮುಳುಗಿ ಸಾವನ್ನಪಿದ್ದ ವ್ಯಕ್ತಿ. ಸೇಂಟ್ರಿಂಗ್ ಕಾಮಗಾರಿ ಕೆಲಸವನ್ನು ಮಾಡುತ್ತಿದ್ದ ಎಂದು ಗುರುತಿಸಲಾಗಿದ್ದು. ಜಂಬಗಿ ಸೇತುವೆಯ ಕೃಷ್ಣಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಸಾವಳಗಿ ಹಾಗೂ ಜಮಖಂಡಿ ಗ್ರಾಮೀಣ ಪೋಲಿಸರು ಭೇಟಿ ನೀಡಿ ಶವವನ್ನು ನದಿಯಿಂದ ಮೇಲಕ್ಕೆತ್ತು ಕಾರ್ಯಕ್ಕೆ ಮುಂದಾದ ಬಳಿಕ. ಶವ ಪತ್ತೆಗಾಗಿ ಗ್ರಾಮಸ್ಥರ ಬಗ್ಗೆ ಮಾಹಿತಿ ತಿಳಿದುಕೊಳುವಷ್ಟರಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಪುತ್ರ ಸ್ಥಳಕ್ಕೆ ಬಂದು ನಮ್ಮ ತಂದೆಯ ಶವ ಎಂದು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾನೆ.
ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಇನ್ನೂ ಯಾವ ಕಾರಣಕ್ಕಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುವುದು ಪೋಲಿಸರಿಂದ ನಿಖರವಾದ ಮಾಹಿತಿ ದೊರೆಯಬೇಕಾಗಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 