ಅವಧಿಗೆ ಮುನ್ನ ಜನಿಸಿದ ಮರಿಯಾನೆ ಸಾವು
ಯಲ್ಲಾಪುರ, ಜ 9, ಅವಧಿಗೆ ಮುನ್ನ ಜನಿಸಿದ ಆನೆ ಮರಿಯೊಂದು ತಾಲ್ಲೂಕಿನ ಬಾಳೆಹಳ್ಳಿ ಅರಣ್ಯ ಪ್ರದೇಶದಲ್ಲಿ ಗುರುವಾರ ಮೃತಪಟ್ಟಿದೆ.ಬುಧವಾರ ರಾತ್ರಿ ಹೆಣ್ಣಾನೆಗೆ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ನಾಲ್ಕೈದು ಆನೆಗಳ ಹಿಂಡು ಕೆರೆಯ ಪಕ್ಕದ ಅರಣ್ಯದಲ್ಲಿ ಬೀಡು ಬಿಟ್ಟಿದ್ದವು. ತೀವ್ರ ನೋವಿನಿಂದ ಬಳಲಿರುವ ತಾಯಿ ಆನೆ ಹತ್ತಾರು ಮೀಟರಲರ್ ಅಂತರದಲ್ಲಿ ಹೊರಳಾಡಿದೆ. ಸುತ್ತಲಿನ ಸಣ್ಣ ಗಿಡಮರಗಳು ಮುರಿದಿರುವುದು ಕಂಡುಬಂದಿದೆ. ಮಧ್ಯರಾತ್ರಿ ಸಮಯದಲ್ಲಿ ಆನೆಯ ಚೀರಾಟ ಸನಿಹದ ಉಗ್ಗಿನಕೇರಿ ಗ್ರಾಮಸ್ಥರಿಗೂ ಕೇಳಿದೆ.ಗುಂಜಾವತಿ ಅರಣ್ಯ ವ್ಯಾಪ್ತಿಯ ಬಾಳೆಹಳ್ಳಿ ಪ್ರದೇಶದಲ್ಲಿ ಆನೆಯೊಂದು, ಅವಧಿಗೂ ಮುನ್ನ ಮರಿಗೆ ಜನ್ಮ ನೀಡಿದೆ. ಆದರೆ, ಸರಿಯಾಗಿ ಬೆಳವಣಿಗೆ ಆಗದ ಕಾರಣ ಮರಿ ಆನೆ ಜನಿಸುವಾಗಲೇ ಮೃತಪಟ್ಟಿದೆ ಎಂದು ಅಲ್ಲಿನ ಅರಣ್ಯ ಸಂರಕ್ಷಣಾಧಿಕಾರಿಗೆ ಎಸ್.ಎಂ.ವಾಲಿ ತಿಳಿಸಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 